ಸ್ವಾತಂತ್ರ್ಯದ 75ನೇ ವರ್ಷದ ಆಚರಣೆ ಅಂಗವಾಗಿ ಆಗಸ್ಟ್ 14 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಈಸೂರು ಗ್ರಾಮ ಶಿಕಾರಿಪುರ ತಾಲ್ಲೂಕು ಶಿವಮೊಗ್ಗ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು. ಈ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿ ಅಭಿನಂದಿಸುವ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್. ಎಸ್ ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪರವರು, ಶ್ರೀ ಕಿಮ್ಮನೆ ರತ್ನಾಕರ್ ಅವರು, ಶಾಸಕರಾದ ಶ್ರೀ ಬಿ .ಕೆ ಸಂಗಮೇಶ್ ಅವರು, ವಿಧಾನಪರಿಷತ್ ಸದಸ್ಯರಾದ ಎಂ. ಇಬ್ರಾಹಿಂರವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಆರ್. ಪ್ರಸನ್ನ ಕುಮಾರ್ ರವರು, ಶ್ರೀ ಮಧು ಬಂಗಾರಪ್ಪರವರು ಶ್ರೀ ಕೆ. ಬಿ ಪ್ರಸನ್ನಕುಮಾರ್ , ಚಂದ್ರಶೇಖರಪ್ಪ ಬೆಳ್ಳೂರು, ಗೋಪಾಲಕೃಷ್ಣ, ಶಾಂತವೀರ ಗೌಡ, ಪ್ರಫುಲ್ಲಾ ಮಧುಕರ್, ಇಸ್ಲಾಯಿಲ್ ಖಾನ್, ಶ್ರೀನಿವಾಸ್, ಮಂಜುನಾಥ್ ಭಂಡಾರಿ ಉಪಸ್ಥಿತರಿದ್ದರು. ಈಸೂರು ಗ್ರಾಮದ ಗ್ರಾಮಸ್ಥರು ಸಾರ್ವಜನಿಕರು ಮತ್ತು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕಾರ್ಯಕ್ರಮಕ್ಕೆ ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ದಿನಾಂಕ :15.08.2021 ರಂದು ಭಾನುವಾರ ಬೆಳಿಗ್ಗೆ 7.30ಗಂಟೆಗೆ ಸ್ವಾತಂತ್ರ್ಯ ಮೆರವಣಿಗೆ ಶಿವಮೊಗ್ಗದ ಗೋಪಿ ವೃತ್ತದಿಂದ ಆರಂಭವಾಗಿ ಬಾಲರಾಜ ಅರಸ್ ರಸ್ತೆಯ ಮುಖಾಂತರ ಜಿಲ್ಲಾ ಕಾಂಗ್ರೆಸ್ ಕಚೇರಿ ಕಾಂಗ್ರೆಸ್ ಭವನಕ್ಕೆ ಆಗಮಿಸಿದ ನಂತರ ಕಾಂಗ್ರೆಸ್ ಭವನದ ಮಹಡಿಯ ಬೆಳಗ್ಗೆ 9 ಗಂಟೆಗೆ ಮೇರೆ ಸ್ವಾತಂತ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್. ಎಸ್ ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153