ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ ಕೃಷಿಕರಾದ ರಮೇಶಪ್ಪ, ರಾಮಪ್ಪ ಸೋಮಪ್ಪ ಮತ್ತು ಇತರೆ 12 ಜನ ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ ನೀಡಿದೆ.
ದೂರದಾರರಾದ ರಮೇಶಪ್ಪ ಮತ್ತು ಇತರ 12 ಜನ ರೈತರು ಕಾಸ್ವಿ ಅಗ್ರಿ ಜೆನೆಟಿಕ್ಸ್ ಪ್ರೈ.ಲಿ. ಮೆಹಬೂಬ್ ನಗರ, ತೆಲಂಗಾಣ, ಶ್ರೀ ಗಂಗಾ ಆಗ್ರೋ ಇನ್ಪುಟ್ಸ್, ಎ.ಪಿ.ಎಂ.ಸಿ. ದಾವಣಗೆರೆ ಮತ್ತು ಶ್ರೀ ಓಂ ಟ್ರೇರ್ಸ್, ಆನವಟ್ಟಿ ರಸ್ತೆ, ಶಿರಾಳಕೊಪ್ಪ, ಶಿವಮೊಗ್ಗ ಜಿಲ್ಲೆ ಇವರುಗಳ ವಿರುದ್ದ ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು ಪೂರೈಸಿದ್ದಾರೆ ಎಂದು ಆಯೋಗಕ್ಕೆ ದೂರು ನೀಡಿದ್ದರು. ಇವರುಗಳು ಶ್ರೀ ಓಂ ಟ್ರೇರ್ಸ್ರವರಿಂದ ಚಾರ್ಮಿ ತಳಿಯ ಭತ್ತದ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಿದ 40-50 ದಿನಗಳಾದರೂ ಸರಿಯಾದ ರೀತಿಯಲ್ಲಿ ಪೈರು ಬೆಳವಣಿಗೆಯಾಗದಿರುವುದರಿಂದ ಪೂರೈಕೆದಾರರನ್ನು ವಿಚಾರಿಸಿ, ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದವರು ಪರಿಶೀಲಿಸಿ ನೀಡಿರುವ ವರದಿಯನ್ನು ಆಧರಿಸಿ, ಪೂರೈಕೆದಾರರು ನೀಡಿರುವ ಭತ್ತದ ಬೀಜ ಕಳಪೆ ಗುಣಮಟ್ಟದ್ದಾಗಿದ್ದು, ಇಳುವರಿ ಕಡಿಮೆಯಾಗಿರುವುದಾಗಿ ದೂರು ನೀಡಿರುತ್ತಾರೆ.
ಈ ಸಂಬಂಧ ದೂರನ್ನು ದಾಖಲಿಸಿಕೊಂಡು ಎದುರುದಾರರಿಗೆ ನೋಟೀಸ್ ನೀಡಿದ್ದು, ಅವರು ತಮ್ಮ ವಕೀಲರ ಮೂಲಕ ಆಯೋಗದ ಮುಂದೆ ಹಾಜರಾಗಿ ತಕರಾರು ಸಲ್ಲಿಸಿರುತ್ತಾರೆ.