ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟದ ವತಿಯಿಂದ ಮೆಸ್ಕಾಂ ಗೆ ಮನವಿ ನೀಡಿದರು.ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಶಿವಮೊಗ್ಗದಲ್ಲಿ 80 ಕೋಟಿ ವೆಚ್ಚದಲ್ಲಿ ನಡೆದ ಅಂತರ್ಗತ ಭೂಗತ ಕೇಬಲ್ ಅಳವಡಿಸಿ ವಿದ್ಯುತ್ ಸಂಪರ್ಕ ನೀಡುವುದಾಗಿ ಹೇಳಿ ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು ಹಾಕದಿರುವ ಬಗ್ಗೆ ದೂರು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ರವರು ಮೆಸ್ಕಾಂ ಇಲಾಖೆಯು ನಾಲೈದು ವರ್ಷಗಳ ಹಿಂದೆ ಶಿವಮೊಗ್ಗ ನಗರದಲ್ಲಿ ಕೇಂದ್ರ ಸರ್ಕಾರದ ಸುಮಾರು ರೂ. 80 ಕೋಟಿ ಅನುದಾನದ ಅಡಿಯಲ್ಲಿ ನೆಲದಡಿಯ ವಿದ್ಯುತ್ ಕೇಬಲ್ ಹಾಕುವ ಕೆಲಸವನ್ನು ಮಾಡಿತ್ತು. ದಿನಾಂಕ 05/02/2025 ರಂದು ದೂರಿನ ಮೂಲಕ ಅಲ್ಕೊಳ ವೃತ್ತದಿಂದ ಉಷಾ ನರ್ಸಿಂಗ್ ಹೋಂ ವೃತ್ತದ ನಡುವಿನ ವಿದ್ಯುತ್ ಕಂಬಗಳನ್ನು ತೆಗೆದು ಹಾಕುವಂತೆ ವೇದಿಕೆ ಒತ್ತಾಯಿಸಿತ್ತು. ಈಗ ಗಾಂಧಿನಗರ, ರಾಜೇಂದ್ರನಗರ, ಜಯನಗರ ಪ್ರದೇಶದಂತಹ ಇತರ ಪ್ರದೇಶಗಳಲ್ಲಿಯೂ ಸಹ ವಿದ್ಯುತ್ ಕಂಬಗಳನ್ನು ತೆಗೆದುಹಾಕದಿರುವುದು ನಮ್ಮ ಸಂಘಟನೆಯ ಗಮನಕ್ಕೆ ಬಂದಿದೆ ಎಂದರು.
ಆದ್ದರಿಂದ ಒಂದು ವಾರದ ಅವಧಿಯಲ್ಲಿ ಈ ಸ್ಥಳಗಳಲ್ಲಿನ ಹಳೆಯ ವಿದ್ಯುತ್ ಕಂಬಗಳನ್ನು ತಕ್ಷಣವೇ ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ನಾವು ನಿಮಗೆ ಎರಡನೇ ಮನವಿಯನ್ನು ಮಾಡುತ್ತಿದ್ದೇವೆ.ಇಲ್ಲದಿದ್ದರೆ, ಇಲಾಖಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ದೂರು ನೀಡುವುದಾಗಿ ಹಿತರಕ್ಷಣ ವೇದಿಕೆ ಆಗ್ರಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಕೆ ವಿ ವಸಂತಕುಮಾರ್ ಸಂಘಟನಾ ಕಾರ್ಯದರ್ಶಿ ಡಾ ಎ ಸತೀಶಕುಮಾರ್ ಶೆಟ್ಟಿ ಮುಂತಾದ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.