ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಉಪವಿಭಾಗದ, ಶಿಕಾರಿಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ಟೌನಿನ ವಾಸಿಯಾದ ಮಹಿಳೆಯೊಬ್ಬರ ಮನೆಯಲ್ಲಿ, ದಿನಾಂಕ 24ರಾತ್ರಿ ಕಳ್ಳರು ಮನೆಯ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ : 0101/2025 ಕಲಂ 305 (ಎ) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿರುತ್ತದೆ.
ನಂತರ ಸದರಿ ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಆರೋಪಿತರ ಪತ್ತೆ ಬಗ್ಗೆ ಶ್ರೀ ಮಿಥುನ್ ಕುಮಾರ. ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-01 ಮತ್ತು ಶ್ರೀ ಎ. ಜಿ. ಕಾರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-02 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಕೇಶವ ಕೆ.ಇ ಪೊಲೀಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ಶ್ರೀ ಸಂತೋಷ್ ಎಂ ಪಾಟೀಲ್ ಸಿಪಿಐ ಶಿಕಾರಿಪುರ ನಗರ ವೃತ್ತ ರವರ ನೇತೃತ್ವದಲ್ಲಿ ಶ್ರೀ ಶರತ್ ಪಿ.ಎಸ್.ಐ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಚ್.ಸಿ ಸಂತೋಷ್ ಕುಮಾರ್, ಪಿ.ಸಿ ಶಿವಾಜಿ ರಾವ್ ಎನ್. ಪಿ.ಸಿ ಗಿರೀಶ್ ನಾಯ್ಕ ಎನ್ ರವರನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿರುತ್ತದೆ.
ಸದರಿ ತನಿಖಾ ತಂಡವು ಪ್ರಕರಣದ ಆರೋಪಿ ಅಭಿಷೇಕ ಗೌಡ ಬಿ.ಜೆ, 25 ವರ್ಷ, ಹಾಲಿ ವಾಸ ರಂಗನಾಥಪುರ ಕಾಲೋನಿ, ಶಿಕಾರಿಪುರ ಟೌನ್. ಈತನನ್ನು ದಸ್ತಗಿರಿ ಮಾಡಿ ಆತನಿಂದ ಕಳುವು ಮಾಡಿದ್ದ 184 ಗ್ರಾಂ ತೂಕದ ಅಂದಾಜು ಮೌಲ್ಯ 14,70,400/- ರೂ ಮೌಲ್ಯದ ಬಂಗಾರದ ಆಭರಣಗಳನ್ನು ಅಮಾನತ್ತುಪಡಿಸಿಕೊಂಡಿರುತ್ತದೆ. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.