ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ಸರ್ಕಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸಂಕೀರ್ಣದ ಪಕ್ಕದಲ್ಲಿ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿ ಸ್ಥಳಾಂತರಿಸಲಾಗುತ್ತಿದೆ ಎಂದು ಸಬ್ ರಿಜಿಸ್ಟರ್ ಧನರಾಜ್ ತಿಳಿಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಕಚೇರಿ ಹಿರಿಯ ಉಪ ನೊಂದಣಾಧಿಕಾರಿಗಳು ಜೂ. 5 ರಂದು ಬಿಡುಗಡೆ ಮಾಡಿರುವ ಮಾಹಿತಿ ನೀಡಿದ್ದಾರೆ.

ನಗರದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿರುವ, ಮಳಿಗೆ ಸಂಖ್ಯೆ 108 ಮತ್ತು 109 ಕ್ಕೆ ಕಚೇರಿ ಸ್ಥಳಾಂತರಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ನೀಡಿದ್ದಾರೆ.

09 ರಿಂದ ಎಪಿಎಂಸಿ ವಾಣಿಜ್ಯ ಸಂಕೀರ್ಣದಲ್ಲಿ ಅಧಿಕೃತವಾಗಿ ನೂತನ ಕಚೇರಿ ಕಾರ್ಯಾರಂಭ ಮಾಡುತ್ತಿದೆ ಎಂದು ಹಿರಿಯ ಉಪನೋಂದಣಾಧಿಕಾರಿಗಳಾದ ಧನರಾಜ್ ಹಾಗೂ ಸುಬ್ರಹ್ಮಣ್ಯ ರವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *