ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಐಸೂರು ವಾಸಿ ಸಂದೇಶ್ ಕುಮಾರ್ ಎಂಬುವವರು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಶಿವಮೊಗ್ಗ ಮತ್ತು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಬೆಂಗಳೂರು ಇವರ ವಿರುದ್ಧ ಮೊಬೈಲ್ ಇನ್ಷೂರನ್ಸ್ ಸಂಬಂಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವೂ ದೂರುದಾರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ದೂರುದಾರರು ಎದುರುದಾರರಿಂದ ಅಕ್ಟೋಬರ್ 2022ರಲ್ಲಿ ರೂ. 84,000/- ಬೆಲೆಯ ಮೊಬೈಲ್ ಫೋನ್ ಖರೀದಿಸಿದ್ದು, ರೂ. 7,999/- ಮೊತ್ತದ ಇನ್ಸೂರನ್ಸ್ ಕಾರ್ಡ್ ಪಡೆದಿರುತ್ತಾರೆ. ಸೆಪ್ಟಂಬರ್ 2023ರಲ್ಲಿ ಈ ಮೊಬೈಲ್ ಫೋನ್ನಲ್ಲಿ ಸಮಸ್ಯೆ ಕಂಡುಬಂದಿದ್ದು, ಶಿವಮೊಗ್ಗದ ಸಂಗೀತ ಮೊಬೈಲ್ಸ್ನಲ್ಲಿ ಸಮಸ್ಯೆ ಬಗ್ಗೆ ತಿಳಿಸಿ, ಇನ್ಸೂರನ್ಸ್ ಕಾರ್ಡ್ ಸಲ್ಲಿಸಿ, ಬೇರೆ ಪೋನ್ ಕೊಡುವಂತೆ ಕೇಳಿದಾಗ ಹೆಚ್ಚುವರಿಯಾಗಿ ರೂ. 52,000/-ಗಳನ್ನು ಪಾವತಿಸಿದರೆ ಹೊಸ ಮೊಬೈಲ್ ನೀಡುವುದಾಗಿ ತಿಳಿಸಿರುತ್ತಾರೆ.
ಈ ಕುರಿತು ಎದುರುದಾರರ ವಿರುದ್ಧ ಸೇವಾ ನ್ಯೂನತೆ ಎಸಗಿರುವುದಾಗಿ ತಿಳಿಸಿ ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.
ದೂರನ್ನು ದಾಖಲಿಸಿಕೊಂಡು ಎದುರುದಾರರಿಗೆ ನೋಟಿಸ್ ಕಳುಹಿಸಿದ್ದು, ತಮ್ಮ ವಕೀಲರ ಮೂಲಕ ಹಾಜರಾಗಿ ದೂರಿಗೆ ತಕರಾರು ಸಲ್ಲಿಸಿ, ತಮ್ಮಿಂದ ಯಾವುದೇ ಸೇವಾ ನ್ಯೂನತೆಯಾಗಿರುವುದಿಲ್ಲವೆಂದು ತಿಳಿದು ಅರ್ಜಿಯನ್ನು ವಜಾ ಮಾಡಬೇಕೆಂದು ಕೋರಿರುತ್ತಾರೆ.