ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ನಿವಾಸಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಭದ್ರಾವತಿ-ಶಿವಮೊಗ್ಗ-ಬೊಮ್ಮನಕಟ್ಟೆ ಮಾರ್ಗವಾಗಿ ಸಂಚರಿಸುವ ಹೊಸ ಮಾರ್ಗಕ್ಕೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಬೊಮ್ಮನಕಟ್ಟೆಯಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೋವಿ ನಿಗಮದ ರಾಜ್ಯ ಅಧ್ಯಕ್ಷ ಎಸ್.ರವಿಕುಮಾರ್, ಯೋಗೀಶ್‌, ಆರ್.ಪ್ರಸನ್ನಕುಮಾರ್‌, ಚೇತನ್ ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿ ದಿನೇಶ್‌, ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *