ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ, ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದರೇ, ಕೆಲಸ ಮಾಡಲು ಲಂಚ ಕೇಳುತ್ತಿದ್ದರೇ, ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದರೇ, ಕಳಪೆ ಕಾಮಗಾರಿ ನಡೆಯುತ್ತಿದ್ದರೇ ಮತ್ತು ಕಂಡುಬಂದರೇ, ಸರ್ಕಾರಿ ನೌಕರ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದರೇ, ಸರ್ಕಾರಿ ನೌಕರ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೇ, ಈ ಬಗ್ಗೆ ದೂರಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಲಿಖಿತ ಅಹವಾಲು ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *