ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಮಾರು 137 ಸರ್ಕಾರಿ ಶಾಲೆಗಳನ್ನು ಸಿ.ಎಸ್‌.ಆರ್ ಅನುದಾನದ ಅಡಿಯಲ್ಲಿ “ಸರ್ಕಾರಿ ಶಾಲೆಗಳ ನವೀಕರಣ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳ” ಅಭಿವೃದ್ದಿ ಮಾಡುವ ಕುರಿತು ಮಾನ್ಯ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಶ್ರೀ ಕೆ.ಹೆಚ್ ಮುನಿಯಪ್ಪ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಶರತ್ ಬಚ್ಚೇಗೌಡ ಅವರೊಂದಿಗೆ ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಸಭೆ ನಡೆಸಿ ಸಮಗ್ರವಾಗಿ ಚರ್ಚಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ಡಾ. ತ್ರಿಲೋಕ ಚಂದ್ರ ಕೆ.ವಿ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕರಾದ ಶ್ರೀ ಎಂ.ಕೂರ್ಮಾರಾವ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎ.ಬಿ ಬಸವರಾಜು, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅನುರಾಧ ಹಾಗೂ ಇನ್ಪೋಸಿಸ್ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *