ಚಲನಚಿತ್ರ ನಟರಾದ ಸಿಹಿಕಹಿ ಚಂದ್ರು ಅವರು ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಕುಂಬಾರ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಸಂಗ ನಡೆಯಿತು. ಕರ್ನಾಟಕ ರಾಜ್ಯ ಕುಂಬಾರರ ಯುವ ಸೈನ್ಯ ಅಧ್ಯಕ್ಷರಾದ ಶಂಕರ್ ಶೆಟ್ಟಿ ಕುಂಬಾರ ಇದನ್ನು ತೀವ್ರವಾಗಿ ಖಂಡಿಸಿದರು. ರಾಜ್ಯವ್ಯಾಪಿ ಆಕ್ರೋಶಕ್ಕೆ ಮಣಿದ ಸಿಹಿಕಹಿ ಚಂದ್ರು ಅವರು ವಿಡಿಯೋ ಮೂಲಕ ರಾಜ್ಯದ ಕುಂಬಾರ ಸಮುದಾಯದ ಬೇಷರತ್ ಕ್ಷಮೆಯನ್ನು ಯಾಚಿಸಿದರು. ಈ ಸಂದರ್ಭದಲ್ಲಿ ಪ್ರಜಾಶಕ್ತಿ ಯೊಂದಿಗೆ ಮಾತನಾಡಿದ ಕರ್ನಾಟಕ ಕುಂಬಾರ ಯುವ ಸೈನ್ಯ ರಾಜ್ಯಾಧ್ಯಕ್ಷರಾದ ಶಂಕರ್ ಶೆಟ್ಟಿ ಕುಂಬಾರ ಕುಂಬಾರರು ಅಸಂಘಟಿತ ರಲ್ಲ ಕರ್ನಾಟಕ ಕುಂಬಾರ ಯುವ ಸೈನ್ಯ ರಾಜ್ಯವ್ಯಾಪಿ ಕುಂಬಾರನ ಒಗ್ಗೂಡಿಸಿದೆ. ಇಡೀ ಸಮಾಜ ಇದುವರೆಗೆ ಕುಂಬಾರರನ್ನು ಕಡೆಗಣಿಸಿದ್ದು ಸಾಕು. ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾವು ಇದನ್ನು ಸಹಿಸುವುದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ