1. ಶ್ರೀ ಎಲ್. ಕೃಷ್ಣಾ ನಾಯ್ಕ , ಪಿಎಸ್ಐ, ಹೊಳೆಹೊನ್ನೂರು ಪೊಲೀಸ್ ಠಾಣೆ, 2. ರಮೇಶ ಎ , ಎಎಸ್ಐ , ವಿನೋಬನಗರ ಪೊಲೀಸ್ ಠಾಣೆ, 3. ಶ್ರೀ ರಮೇಶ , ಎಎಸ್ಐ , ಹೊಸನಗರ ಪೊಲೀಸ್ ಠಾಣೆ, ಶಿವಮೊಗ್ಗ ಇವರುಗಳು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿ 31ರಂದು ವಯೋನಿವೃತ್ತಿಯನ್ನು ಹೊಂದಿದ್ದು, ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, - 1 ಶಿವಮೊಗ್ಗ ಜಿಲ್ಲೆ ರವರು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಸೈಯದ್ ಖಾದರ್, ಎ ಎ ಓ, ಶಿವಮೊಗ್ಗ ಮತ್ತು ಶ್ರೀ ಎಂ ಎಂ ಮಾಳಗಿ ಶಾಖಾಧೀಕ್ಷಕರು ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ ರವರು ಉಪಸ್ಥಿತರಿದ್ದರು
.