ಕೋಟೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಂಜುನಾಥ್ ಸಿ ರವರು ಪ್ರಾಮಾಣಿಕೆ ಕೆಲಸ ಮಾಡಿ ಕರ್ತವ್ಯ ಮೆರೆದಿದ್ದಾರೆ.
ನಗರದ ಗಾಂಧಿಬಜಾರ್ ರಸ್ತೆಯಲ್ಲಿ ರಾತ್ರಿ ವೇಳೆ ಕರ್ತವ್ಯ ಮುಗಿಸಿ ಮನೆಗೆ ಹೋಗುವ ವೇಳೆ ರಸ್ತೆ ಬದಿಯಲ್ಲಿ ಬಿದ್ದ ಪರ್ಸ್ ಕಳೆದು ಕೊಂಡವರನ್ನು ಪತ್ತೆ ಹಚ್ಚಿ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಶಿವಮೊಗ್ಗದ ಕೋರ್ಪಲಯ್ಯ ಕೇರಿಯ ವೆಂಕಟೇಶ್ ಎಂಬ ಕಲಾವಿದರು ತಮ್ಮ ಪರ್ಸನ್ನು ಕಳೆದುಕೊಂಡಿದ್ದರು. ಇಂದು ಜಿಲ್ಲಾಧಿಕಾರಿ ಆವರಣದಲ್ಲಿ ಮಂಜುನಾಥ್ ರವರು ವೆಂಕಟೇಶ್ ರವರಿಗೆ ಪರ್ಸನ್ನು ವಾಪಸ್ ಕೊಟ್ಟರು. ಇವರ ಈ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ಅಭಿನಂದಿಸಿದ್ದಾರೆ.