ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಆದ ಸಂತೋಷ್ ಎಂ ಎಸ್ ರವರು ಶಿಕಾರಿಪುರ ನಗರ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ವಹಿಗಳನ್ನು ಮತ್ತು ಪೊಲೀಸ್ ಠಾಣೆಯ ತಪಾಸಣೆ ಮಾಡಿದರು.
ನಂತರ ಶಿಕಾರಿಪುರ ತಾಲೂಕಿನ ಬೆಂಡೆಕಾಯಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಒಂದು ಮತ್ತು ಎರಡಕ್ಕೆ ಅನಿರೀಕ್ಷಿತ ಭೇಟಿ ಕೊಟ್ಟು ಅಲ್ಲಿ ತಪಾಸಣೆ ನಡೆಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರಿಂದ ಮಕ್ಕಳ ಪಾಲನೆ ಪೋಷಣೆ ಮತ್ತು ಅಂಗನವಾಡಿಯಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.