ಹಳೇ ಸರ್ಕಾರಕ್ಕಿಂತ ಈಗಿನ ಹೊಸ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹೇಳಿದ್ದಾರೆ.
ಅವರು ನಗರದ ಅಗಮುಡಿ ಕನ್ವೇಷನ್ ಹಾಲ್‌ನಲ್ಲಿ ನೀರಾವರಿ ನಿಗಮ ನಿಯಮಿತ, ತುಂಗಾ ಮೇಲ್ದಂಡೆ ಮತ್ತು ಭದ್ರಾ ಗುತ್ತಿಗೆದಾರರ ಹೋರಾಟ ಸಮಿತಿ, ಶಿವಮೊಗ್ಗ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರ ಅಭಿನಂದನಾ ಸಮಾರಂಭದಲ್ಲಿ ಅಭಿ ನಂದನೆಯನ್ನು ಸ್ವೀಕರಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ರಾಜ್ಯದಲ್ಲಿ ೯ ಇಲಾಖೆಗಳಿಂದ ಗುತ್ತಿಗೆದಾರರಿಗೆ ೩೨ ಸಾವಿರ ಕೋಟಿಗೂ ಹೆಚ್ಚು ಹಣ ಕಳೆದ ಎರಡು-ಮೂರು ವರ್ಷಗಳಿಂದ ಬಾಕಿಯಿದೆ. ಕಂಟ್ರಾö್ಯಕ್ಟರ್ ಗಳು ತುಂಬಾ ಸಂಕಷ್ಟದಲ್ಲಿದ್ದಾರೆ. ಯಾರಿಗೂ ಪೇಮೆಂಟ್ ಆಗುತ್ತಿಲ್ಲ. ೨೦ ಪರ್ಸೆಂಟ್ ಕಮೀಷನ್ ನೀಡಿದ ಕೆಲವ ರಿಗೆ ಬಿಲ್‌ಗಳು ಆಗುತ್ತಾ ಇದೆ. ಈ ಬಗ್ಗೆ ಸಂಬAಧಪಟ್ಟ ಸಚಿವರು ಮತ್ತು ಮುಖ್ಯ ಮಂತ್ರಿಗಳಿಗೆ ಈಗಾಗಲೇ ಹಲವು ಭಾರಿ ಮನವಿ ಮಾಡಿದ್ದೇವೆ. ಗುತ್ತಿಗೆದಾರ ರಿಂದಲೇ ಈ ಸರ್ಕಾರ ಬಂದಿದೆ ಎಂದು ಮನಸ್ಸಲ್ಲಿಟ್ಟುಕೊಂಡು ಕೂಡಲೇ ಅವರು ಎಲ್ಲಾ ಬಲ್‌ಗಳನ್ನು ಕ್ಲಿಯರ್ ಮಾಡ ಬೇಕಿದೆ. ಯಾಕೆಂದರೆ ಹಿಂದಿನ ಅಧ್ಯಕ್ಷ ರಾದ ಕೆಂಚಯ್ಯನವರು ಮಾಡಿದ ಆರೋಪದಿಂದಲೇ ಈಗಿನ ಸರ್ಕಾರಕ್ಕೆ ಅಧಿಕಾರ ಸಿಕ್ಕಿತ್ತು. ನಾವು ಯಾವ ಕಂಟ್ರಾö್ಯ ಕ್ಟರ್‌ಗಳು ಕಳಪೆ ಕಾಮಗಾರಿ ಮಾಡುವು ದಿಲ್ಲ. ಟೈಮ್ ಬಾಂಡ್ ಆಗಿ ಕೆಲವು ಯೋಜನೆಗಳಿರುತ್ತವೆ.

ಕೆಲವೊಂದು ಸಂದರ್ಭದಲ್ಲಿ ಅನುದಾನ ಬಿಡುಗಡೆ ತಡವಾದರೂ ನಾವು ಕೆಲಸ ಮಾಡುತ್ತೇವೆ. ಕೆಲವೊಂದು ಬಾರಿ ತುರ್ತು ಸಂದರ್ಭ ದಲ್ಲಿ ಎಲ್ಲಾ ಅಧಿಕಾರಿಗಳ ಬಾಯಿ ಮಾತಿ ನಲ್ಲೇ ಕೆಲಸ ಮಾಡಿಕೊಡುವ ಪದ್ಧತಿ ಯಿದೆ. ಆದರೆ ಕೆಲಸ ಮಾಡಿದ ಮೇಲೆ ಕೆಲಸ ಮಾಡಿಸಿದ ಅಧಿಕಾರಿ ಜವಾಬ್ದಾರಿ ಯಿಂದ ನುಣುಚಿಕೊಳ್ಳುತ್ತಾರೆ. ಆಗ ಗುತ್ತಿಗೆದಾರ ಹೋರಾಟ ಮಾಡುವುದು ಅನಿವರ‍್ಯವಾಗುತ್ತದೆ. ರಾಜ್ಯದಲ್ಲಿ ಅನೇಕ ದುರಂತಗಳಿಗೆ ಇದು ಕೂಡ ಕಾರಣ ವಾಗಿದೆ. ಇದರಲ್ಲಿ ೧೦೦ಕ್ಕೆ ನೂರು ಕಾರ್ಯಪಾಲಕ ಅಭಿಯಂತರರದ್ದೇ ತಪ್ಪಾಗಿರುತ್ತದೆ. ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್ ಪ್ರಮಾಣ ಜಾಸ್ತಿಯಾಗಿದೆ. ಕೆಂಪಣ್ಣನವರು ಆರೋಪ ಮಾಡಿದಾಗ ಕೆಲವರು ವಿರೋಧ ಮಾಡಿ ದ್ದೆವು. ಆ ಆರೋಪವನ್ನು ಉಪಯೋಗಿಸಿ ಈ ಸರ್ಕಾರ ಅಧಿಕಾರಕ್ಕೆ ಬಂತು. ಆದರೂ ಮತ್ತೆ ಅದಕ್ಕಿಂತ ಹೀನಾಯ ಪರಿಸ್ಥಿತಿ ಈಗ ಬಂದಿರುವುದು ನಮ್ಮ ದುರ್ಧೈವ ಎಂದರು.


೪೦ ಪರ್ಸೆಂಟ್ ಆರೋಪ ಸುಳ್ಳಲ್ಲ. ಪೂಜೆಯಿಂದ ಹಿಡಿದು ಬಿಲ್ಲನ್ನು ಮಾಡುವವರೆಗೆ ಎಲ್ಲವನ್ನು ಲೆಕ್ಕಹಾಕಿದರೆ ಹಿಂದೆ ಅಷ್ಟಾಗುತ್ತಿತ್ತು. ಈಗ ಅದಕ್ಕಿಂತ ಹೆಚ್ಚು ನೀಡಬೇಕಾಗಿದೆ. ಕೆಲವು ಸ್ಥಳೀಯ ಗುತ್ತಿಗೆದಾರರು ಮತ್ತು ಸ್ಥಳೀಯ ಜನಪ್ರತಿ ನಿಧಿಗಳ ಮೇಲೆ ಅವಲಂಭಿತವಾಗಿರುತ್ತದೆ. ಮಾತುಕತೆ ಆದರೆ ಮಾತ್ರ ಪೂಜೆಗೆ ಬರುತ್ತೇನೆ ಎನ್ನುವವರು ಇದ್ದಾರೆ. ಈಗ ಕೆಲಸ ಮಾಡುವುದು ಸುಲಭವಲ್ಲ. ನೂರಾರು ಮೂಕರ್ಜಿಗಳು ಬರುತ್ತವೆ ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ. ನಗರಾಭಿವೃದ್ಧಿ ಸಚಿವರು ಕೆಲವೇ ಕೆಲವು ಕಂಟ್ರಾö್ಯಕ್ಟರ್‌ಗಳಿಗೆ ಬೆಂಗಳೂರಿನಲ್ಲೇ ಗುತ್ತಿಗೆ ನೀಡುತ್ತಿರುವುದು ನಿಜ ಮತ್ತು ಅವರು ನಿಗಧಿತ ದರಕ್ಕಿಂತ ಕಡಿಮೆ ತೋರಿಸುತ್ತಿರುವುದು ನಿಜ. ಇದು ಭೈರತಿ ಸುರೇಶ್‌ರವರ ಆಯ್ದ ಗುತ್ತಿಗೆದಾರರಿಗೆ ಕಂಟ್ರಾö್ಯಕ್ಟ್ಗಳು ಹೋಗುತ್ತಿರುವುದು ನಿಜ ಈ ಬಗ್ಗೆ ಅವರ ಬಳಿಯೂ ನಾವು ಮಾತನಾಡಿದ್ದೇವೆ ಎಂದರು.


ಕೂಡಲೇ ಸರ್ಕಾರ ನಮ್ಮ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಗುತ್ತಿಗೆ ದಾರರ ಸಂಘದ ಉಪಾಧ್ಯಕ್ಷರಾದ ಎನ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಇದೂವರೆಗೆ ಸೇವೆ ಸಲ್ಲಿಸಿದ ಹಿರಿಯ ಗುತ್ತಿಗೆದಾರರನ್ನು ಈ ಸಂದ ರ್ಭದಲ್ಲಿ ಸನ್ಮಾನಿಸಲಾಯಿತು. ಹಿರಿಯ ಮಹಿಳಾ ಗುತ್ತಿಗೆದಾರರಾದ ರಕ್ಷಮ್ಮ ಮತ್ತು ಶಕುಂತಳಾ ಅವರನ್ನೂ ಕೂಡ ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಎಂ. ಜಗದೀಶ್ ಗುಡಮಘಟ್ಟ ವಹಿಸಿ ದ್ದರು. ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷರಾದ ಎಂ.ಎಸ್. ಶಂಕ ಗೌಡಶಾನಿ, ಗೌರವಾಧ್ಯಕ್ಷರಾದ ಜಗನ್ನಾಥ್ ಬಿ. ಶೇಜಿ, ಕೆ. ರಾಧಾಕೃಷ್ಣನಾಯಕ್, ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ, ಕೆ.ಎಸ್. ಶಾಂತೇಗೌಡ, ಸಿ.ಡಿ. ಕೃಷ್ಣ, ಡಿ.ಎಂ. ನಾಗರಾಜು, ಎಂ. ರಮೇಶ್, ಎಂ.ಹೆಚ್. ಯತಿರಾಜು, ಜಿಲ್ಲಾ ಗೌರವಾಧ್ಯಕ್ಷ ಕೆ.ಜಿ. ಪಾಟೀಲ್, ಪ್ರಭಾಕರ್ ಶೆಟ್ಟಿ, ಎಸ್.ಕೆ. ಧರ್ಮೇಶ್, ಜಿ.ಎ. ಪ್ರಕಾಶ್, ಹೆಚ್.ಸಿ. ಉಮೇಶ್, ಶ್ರೀನಿವಾಸ್ ರೆಡ್ಡಿ, ಲೋಕೇಶ್ ಆನಂದ್, ರಾಜೇಗೌಡ, ಶಿವಕುಮಾರ್, ಚನ್ನಬಸವರಾಜು, ಜಿ.ವಿ.ಎಂ. ರಾಜು ಮತ್ತಿತರರಿದ್ದರು.