
ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಕೇವಲ ಕಾನೂನಿಂದ ಮಾತ್ರ ಸಾಧ್ಯವಿಲ್ಲ. ಅದಕ್ಕೆ ಜನ ಸಾಮಾನ್ಯರ ಸಹಕಾರ ಕೂಡ ಅತಿ ಮುಖ್ಯವಾಗಿ ಬೇಕಾಗಿದ್ದು ನಾವೆಲ್ಲರೂ ವನ್ಯಜೀವಿ ಸಂಪತ್ತನ್ನು ರಕ್ಷಣೆ ಮಾಡುವ ಮನೋಭಾವ ಬೆಳಿಸಿಕೊಳ್ಳೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ಕರೆ ನೀಡಿದರು.
ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಗುರುವಾರ ನಗರದ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿಗಳ ಕಚೇರಿಯ ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟಿçÃಯ ಅರಣ್ಯ ಹುತಾತ್ಮರ ದಿನಾಚರಣೆ-2025 ಕಾರ್ಯಕ್ರಮದಲ್ಲಿ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು.
ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಮಾಡುವ ಅಧಿಕಾರಿಗಳಿಗೆ ಜನರಿಂದ ಬೆಂಬಲ ಸಿಗುತ್ತಿಲ್ಲದಿರುವುದು ಶೋಚನಿಯವಾಗಿದೆ. ಕಳೆದ 10 ವರ್ಷದಲ್ಲಿ 20 ಮಂದಿ ಅರಣ್ಯ ಅಧಿಕಾರಿ ಹುತಾತ್ಮರಾಗಿದ್ದಾರೆ. ನಮ್ಮಲ್ಲಿ ಎಷ್ಟೇ ತಂತ್ರಜ್ಞಾನ ಮುಂದುವರೆದರೂ ಇಂತಹ ಅನಾಹುತಗಳನ್ನು ತÀಡೆಯಲು ಸಾಧ್ಯವಾಗುತ್ತಿಲ್ಲ ಎಂದರು ಬೇಸರ ವ್ಯಕ್ತಿಪಡಿಸಿದರು.
ಅರಣ್ಯ ಇಲಾಖೆಯಲ್ಲಿ ಸಾಕಷ್ಟು ತಂತ್ರಜ್ಞಾನದ ಉಪಯೋಗ ಆಗಬೇಕಿದೆ. ಆದರೆ ಇಂತಹ ಬಳಕೆ ಆಗದೇ ಇರುವ ಕಾರಣಕ್ಕೆ ಅಧಿಕಾರಿಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದನಿಸುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯು ತನಿಖಾ ಅಧಿಕಾರಿಗಳಿಗೆ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಬೇಕು ಎಂದರು.
ರಾಜ್ಯದಲ್ಲಿ 3 ಕ್ರಿಮಿನಲ್ ಕಾನೂನುಗಳು ಬದಲಾವಣೆ ಆಗಿ ಹೊಸ ಕಾನೂನು ಜಾರಿಗೆ ಬಂದಿದೆ. ಕಂದಾಯ, ಪೊಲೀಸ್ ಇಲಾಖೆ ಒಳಗೊಂಡAತೆ ಅನೇಕ ಇಲಾಖೆಗಳಿಗೆ ಈ ಕಾನೂನಗಳ ಬಗ್ಗೆ ನಮ್ಮ ತಂಡ ಜಾಗೃತಿ ಮೂಡಿಸುತ್ತಿದೆ. ಅರಣ್ಯ ಇಲಾಖೆಯಲ್ಲಿಯೂ ಇಂತಹ ಜಾಗೃತಿ ಕಾರ್ಯಕ್ರಮಗಳು ಆಗಬೇಕಿದೆ. ಆಗ ನ್ಯಾಯಾಲಯದಲ್ಲಿ ಅರಣ್ಯ ಇಲಾಖೆಗೆ ಸಂಬAಧಿಸಿದ ಪ್ರಕರಣಗಳ ಬಗ್ಗೆಯೂ ಅಧಿಕಾರಿಗಳಿಗೆ ಅರಿವು ಮೂಡುತ್ತದೆ ಎಂದರು.
ಆನೆ ಯೋಜನೆಯ ಅಪರ ಮುಖ್ಯ ಸಂರಕ್ಷಣಾಧಿಕಾರಿ ಮನೋಜ್ ರಾಜನ್ ಮಾತನಾಡಿ, ಪ್ರಾಣಿಗಳ ದಾಳಿ, ಪರಿಸರ ವಿಕೋಪದಂತಹÀ ಅನಾಹುತಗಳಿಂದ ಕರ್ನಾಟಕದಲ್ಲಿ 62 ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಾಣತ್ಯಾಗ ಮಾಡಿದ್ದಾರೆ. ಪ್ರಾಣಿ ಮತ್ತು ಮಾನವ ಸಂಘರ್ಷದಿAದ 35 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ 6300 ಕ್ಕೂ ಹೆಚ್ಚು ಆನೆಗಳಿದ್ದು ಇಡೀ ದೇಶದ ಮಾನವ ಮತ್ತು ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ಗಮನಿಸಿದರೆ ನಮ್ಮ ರಾಜ್ಯದಲ್ಲಿ ಅನಾಹುತಗಳÀÄ ಕಡಿಮೆ ಮಟ್ಟದಲ್ಲಿದೆ ಎಂದು ತಿಳಿಸಿದರು.
ಇಂತಹ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಆನೆ ಓಡಾಡುವ ದಾರಿಯಲ್ಲಿ ಬ್ಯಾರಿಕೇಡ್, ಕಾರಿಡಾರ್ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ತಂತ್ರಜ್ಞಾನ ಹಾಗೂ ಶ್ವಾನದಳ ಸಹಾಯದಿಂದ ಆನೆಯನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಹಾಗೂ ಕಳೆದ 2 ವರ್ಷಗಳಿಂದ ಅರಣ್ಯದಲ್ಲಿ ಪ್ರಾಕೃತಿಕ ವಿಕೋಪದಂತಹ ಯಾವುದೇ ಅನಾಹುತಗಳು ಕೂಡ ಕಂಡು ಬಂದಿಲ್ಲ.
ಸರ್ಕಾರದ ಸೂಚನೆಯಂತೆ, ಅರಣ್ಯ ಇಲಾಖೆ ಅಧಿಕಾರಿಗಳ ಹಿತದೃಷ್ಟಿಯಿಂದ ಇಂಟಿಗ್ರೇಟೆಡ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಈ ಮೂಲಕ ಅಧಿಕಾರಿಗಳು ಜಾಗೃತೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗುತ್ತಿದ್ದು, ತಮ್ಮ ಲೋಪಗಳಿಂದ ಪ್ರಾಣತ್ಯಾಗ ಮಾಡುವಂತಹ ಸಂದರ್ಭವನ್ನು ತಂದಿಟ್ಟುಕೊಳ್ಳಬಾರದು ಎಂದು ಸಲಹೆ ನೀಡಲಾಗುತ್ತಿದೆ.
ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಮಾತನಾಡಿ, ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸುವುದು ಒಂದು ಉತ್ತಮವಾದ ಆಚರಣೆಯಾಗಿದೆ.
ದೇಶದ ಸೇನೆಯಂತೆೆ ಅರಣ್ಯ ಇಲಾಖೆಯೂ ಕಾರ್ಯನಿರ್ವಹಿಸುತ್ತಿದ್ದು, ಇದು ನಿಸರ್ಗವನ್ನು ಕಾಯುವ ಸೇನೆಯಾಗಿದೆ. ಅದರಂತೆ ಶರಾವತಿ ಸಂತ್ರಸ್ತರಿಗೆ ಪರಿಹಾರ ಹಾಗೂ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಸಂಬAಧಿಸಿದAತೆ ಕಂದಾಯ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ ಉತ್ತಮ ಕೆಲಸ ಮಾಡುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಭೂಮಿ ಅತಿಕ್ರಮಣ ಹಾಗೂ ಅರಣ್ಯ ಭೂಮಿಗೆ ಸಂಬAಧಿಸಿದ ಪ್ರಕರಣಗಳು ಬಾಕಿ ಇದ್ದು, ಇವನ್ನು ಬಗೆಹರಿಸುವ ನಿಟ್ಟಿನಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಒಟ್ಟಾಗಿ ಕೆಲಸ ಮಾಡಿದರೆ ಅವುಗಳನ್ನು ವಿಲೇವಾರಿ ಮಾಡಬಹುದು ಎಂದರು.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ ಮಾತನಾಡಿ, ವನ್ಯಪ್ರಾಣಿ ಹಾಗೂ ಪ್ರಕೃತಿ ವಿಕೋಪದಿಂದ ಸಾವು ಸಂಭವಿಸುತ್ತದೆ. ಹಾಗಾಗಿ ಅಧಿಕಾರಿಗಳು ಜಾಗೃತೆಯಿಂದ ಕೆಲಸ ಮಾಡಬೇಕು. ಅರಣ್ಯ ಸೇವೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿಯ ಜೀವ ಅಮೂಲ್ಯವಾದದ್ದು. ಆದ್ದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿಬೇಕು ಎಂದರು.
ಅರಣ್ಯ, ಭೂಮಿ, ಅಭಿವೃದ್ದಿಯ ವಿಚಾರದಲ್ಲಿ ಅಧಿಕಾರಿಗಳಿಗೆ ಒತ್ತಡ ಇದೆ. ಆದರೂ ಎಲ್ಲಾ ಸಂದರ್ಭದಲ್ಲಿಯೂ ಪೊಲೀಸ್, ಕಂದಾಯ, ಕಾನೂನು ಇಲಾಖೆಗಳು ನಮಗೆ ಬೆಂಬಲವಾಗಿ ನಿಂತಿವೆ. ಅಧಿಕಾರಿಗಳ ಪ್ರಾಣತ್ಯಾಗವನ್ನು ಇಲಾಖೆಯು ಸದಾ ನೆನೆಯುತ್ತದೆ. ಅವರ ಕುಟುಂಬದ ನಷ್ಟವನ್ನು ತುಂಬಿಕೊಳ್ಳಲು ಸರ್ಕಾರವು ಕೂಡ ರೂ. 50 ಲಕ್ಷ ಪರಿಹಾರ ನೀಡಲು ಮುಂದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಆರ್.ಅಜ್ಜಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಓ ಹೇಮಂತ್.ಎನ್, ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ್, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.