ಶಿವಮೊಗ್ಗ ನಗರದ ದುರ್ಗಿಗುಡಿ ಬಡಾವಣೆಯಲ್ಲಿ ಪ್ರತಿನಿತ್ಯ ಪಾಲಿಕೆ ಕಸಸಂಗ್ರಹ ವಾಹನ ಕಾರ್ಯ ನಿರ್ವಹಿಸುತ್ತಿದ್ದರೂ ಕೆಲವು ಸಾರ್ವಜನಿಕರು ರಸ್ತೆ ಬದಿಗಳಲ್ಲಿ ರಾತ್ರಿ ಹೊತ್ತು ಕಸ ಸುರಿದು ಸಮಸ್ಯೆ ಉಂಟು ಮಾಡುತ್ತಿದ್ದರು. ಮುಖ್ಯವಾಗಿ ದುರ್ಗಿಗುಡಿ ಶಾಲೆ ಎದುರಲ್ಲಿ ಪಾಲಿಕೆ ಸಿಬ್ಬಂದಿಗಳು ಪ್ರತಿನಿತ್ಯ ಸ್ವಚ್ಛ ಮಾಡುತ್ತಿದ್ದರೂ ಕಸದ ರಾಶಿಯ ಅವಾಂತರ ನಿಂತಿರಲಿಲ್ಲ.


ಈ ಸಮಸ್ಯಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹೊಸ ತಂತ್ರ ಕಂಡುಕೊಂಡಿದೆ! ಇಂತಹ ಸ್ಥಳಗಳನ್ನು ಪೂರ್ಣ ಸ್ವಚ್ಛಗೊಳಿಸಿ ಆ ಜಾಗದಲ್ಲಿ ಪಾಲಿಕೆ ಮಹಿಳಾ ಸಿಬ್ಬಂದಿಗಳಿಂದ ಅಂದವಾದ ರಂಗೋಲಿ ಹಾಕಿಸಿ ಸಾರ್ವಜನಿಕ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.
ಪಾಲಿಕೆಯ ಶ್ರಮದ ಜೊತೆಗೆ ಗಾಂಧಿಮಾರ್ಗ ಜನಜಾಗೃತಿ ಕಾರ್ಯಕ್ಕೆ ಪ್ರಜ್ಞಾವಂತ ನಾಗರಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸ್ವಚ್ಛ, ಸ್ವಸ್ಥ, ಸುಂದರ , ಸುಸಂಸ್ಕೃತ ಶಿವಮೊಗ್ಗ ನಗರದ ನಿರ್ಮಾಣ ಕಾರ್ಯದಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಮತ್ತು ಆರೋಗ್ಯ ಅಧಿಕಾರಿ ವಸಂತ್ ಕುಮಾರ್ ಸಿಬ್ಬಂದಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *