
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್ ಅವರು ಜಿಲ್ಲೆಯ ಮಾಚೇನಹಳ್ಳಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಕಾಲೇಜಿನ ಆಡಳಿತ ಹಾಗೂ ತಾಂತ್ರಿಕ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

2025-26 ರ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಿರುವ ಕೋರ್ಸ್ಗೆ ದಾಖಲಾದ ವಿದ್ಯಾರ್ಥಿನಿಯರಿಗೆ “ದೀಪಿಕಾ ವಿದ್ಯಾರ್ಥಿ” ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್.ಎಂ, ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್, ಜಿಟಿಟಿಸಿ ಪ್ರಾಶುಂಪಾಲರು, ಘಟಕದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.