ದೇಶದ ಮಾಜಿ ಪ್ರಧಾನಿ ದೂರ ದೃಷ್ಟಿಯನಾಯಕ ಯುವಕರ ಕಣ್ಮಣಿ ದಿವಂಗತ ರಾಜೀವ್ ಗಾಂಧಿಯವರ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಗರದ ಸಂಜೀವಿನಿ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ನಲ್ಲಿ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ ರವರ ನೇತೃತ್ವದಲ್ಲಿ ರಕ್ತದಾನ ಶಿಬಿರನಡೆಸಲಾಯಿತು.ಅತಿ ಹೆಚ್ಚು ಯುವಕರು ರಕ್ತದಾನ ಶಿಬಿರದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ ಗಿರೀಶ್, ಯುವ ಕಾಂಗ್ರೆಸ್ ಮುಖಂಡರಾದ ಆರ್. ಕಿರಣ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್. ಕುಮರೇಶ್, ಪದಾಧಿಕಾರಿಗಳಾದ ಎಂ.ರಾಹುಲ್ , ಪುಷ್ಪಕ್ ಕುಮಾರ್, ಅರುಣ್ ನವುಲೆ , ದೇವರಾಜ್ , ರಾಕೇಶ್ , ಶಿವಕುಮಾರ್ , ಗೋಪಿ , ಮುರಳಿ , ಚರಣ್ , ಶರತ್ ,ಉದಯ್ , ರಜತ್ ,ದರ್ಶನ್ , ಗಗನ್ , ಸಮರ್ಥ್,ಮನೋಜ್, ವಿನಯ್, ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ