ಭಾರತದ ಮಾಜಿ ಪ್ರಧಾನ ಮಂತ್ರಿ ದಿವಂಗತ ರಾಜೀವ್ ಗಾಂಧಿ ಹಾಗು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ,ದೇವರಾಜ್ ಅರಸ್ ಅವರ ಜನ್ಮ ದಿನಾಚರಣೆಯನ್ನು ಸಾಗರದ ಕಾಂಗ್ರೆಸ್ ಭವನದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ಅವರ ಅಧ್ಯಕ್ಷತೆಯಲ್ಲಿ ಮಾಜಿ ಸಚಿವರು ನಮ್ಮ ನಾಯಕರಾದ ಶ್ರೀ ಕಾಗೋಡು ತಿಮ್ಮಪ್ಪನವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮಾಜಿ ಕೆಪಿಸಿಸಿ ಕಾರ್ಯದರ್ಶಿಗಳಾದ ಡಾ|ರಾಜನಂದಿನಿ ಕಾಗೋಡು, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐ,ಎನ್,ಸುರೇಶ್ ಬಾಬು, ಮಾಜಿ ಜಿಲ್ಲಾಧ್ಯಕ್ಷರಾದ ತೀ,ನ,ಶ್ರೀನಿವಾಸ್, ಮಾಜಿ ಎಪಿಎಂಸಿ ಅಧ್ಯಕ್ಷರಾದ ರವಿಗೌಡ,ತಾಲ್ಲೂಕು ಮಹಿಳಾಧ್ಯಕ್ಷರಾದ ಸುಮಂಗಲ ರಾಮಕೃಷ್ಣ ಹಾಗು ನಗರಸಭೆ ವಿರೋಧಪಕ್ಷದ ನಾಯಕರಾದ ಗಣಪತಿ ಮಂಡಗಳಲೆ ಹಾಗು ಹಲವು ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ