ಕೃಷಿ ನಿರತ ಮಹಿಳಾ ದಿನಾಚರಣೆಯನ್ನು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ಆಚರಿಸಲಾಯಿತು.ಕೃಷಿಯಲ್ಲಿ ಮಹಿಳೆಯರ ದಿನವನ್ನು ಡಿಸೆಂಬರ್ 4 ,2018 ರಿಂದ ಪ್ರತಿ ವರ್ಷ ಭಾರತೀಯ ಕೃಷಿ ಸಂಶೋಧನಾ ಮಂಡಳಿಯು ಪ್ರತಿ ವರ್ಷ ಆಚರಿಸಲು ನಿರ್ಧರಿಸಲಾಗಿದೆ.ಇದರ ಮುಖ್ಯ ಉದ್ದೇಶ ಕೃಷಿಯಲ್ಲಿ ಮಹಿಳೆಯರ ಕೊಡುಗೆಗಳನ್ನು ಗುರುತಿಸುವುದು ಮತ್ತು ಗೌರವಿಸುವುದಾಗಿದೆ, ಜೊತೆಗೆ ಮಹಿಳೆಯರು ಹೆದರಿಸುವ ಸವಾಲುಗಳನ್ನು ಪರಿಹರಿಸುವುದು.
ಈ ದಿನದಂದು ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಮತ್ತು ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಸವಾಲುಗಳು ಮತ್ತು ಅವರ ಕೊಡುಗೆಗಳ ಕುರಿತು ಚರ್ಚಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ಕೋಕೋ ಬೆಳೆಯ ಉತ್ಪಾದನೆ, ಸಂಸ್ಕರಣೆ, ಮತ್ತು ಮೌಲ್ಯವರ್ಧನ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರ ನವಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ. ಬಿ .ಹೆಮ್ಲಾ ನಾಯಕ್, ಶಿಕ್ಷಣ ನಿರ್ದೇಶಕರು ಹಾಗೂ ಪ್ರಭಾರ ಕುಲಪತಿಗಳು ನೆರವೇರಿಸಿ ಕೃಷಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೇ ಕಾರ್ಯಕ್ರಮವು ಸಾಧ್ಯವಿಲ್ಲ ಮತ್ತು ಮಹಿಳೆಯರು ಕೃಷಿ ಆಧಾರಿತ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ.
ಮಹಿಳೆಯರು ಕೃಷಿ ಮತ್ತು ಕುಟುಂಬ ನಿರ್ವಹಣೆ ಎರಡರಲ್ಲೂ ಪ್ರಮುಖ ಪಾತ್ರ ವಹಿಸುವುದರಿಂದ ಮಹಿಳೆಯರ ಈ ಕಾರ್ಯ ತುಂಬಾ ಶ್ಲಾಘನೀಯ ವಾಗಿದೆ ಎಂದು ಪ್ರಶಂಶಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಪ್ರತಿಭಾ , ಸಂಸ್ಥಾಪಕರು, ಜೀವನಮುಖಿ ಸಂಸ್ಥೆ, ಸಾಗರ ಇವರು ನೆರವೇರಿಸಿ ಮಹಿಳೆಯರ ಕೃಷಿಯಲ್ಲಿ ಕೆಲಸಗಳನ್ನು ಶ್ಲಾಘಿಸಿದರು. ರ್ಡಾಕ್ಟರ್ ಸುನಿಲ್ ಸಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತವನ್ನು ಕೋರಿ ಹಾಗೂ ಈ ಕಾರ್ಯಕ್ರಮದ ಕುರಿತಾಗಿ ವಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಡಾ ನಾರಾಯಣ ಮಾವರ್ಕರ್, ಡೀನ್ ಸ್ನಾತೋಕೋತರ,
ಡಾಕ್ಟರ್ ಡಿ ತಿಪ್ಪೇಶ್ , ಡೀನ್ ಕೃಷಿ, ಮಂಜುಳಾ ಕೃಷಿ ಉಪನಿರ್ದೇಶಕರು, ಡಾಕ್ಟರ್ ಸಂಜಯ್ ಜಂಟಿ ನಿರ್ದೇಶಕರು ತೋಟಗಾರಿಕೆ ಇಲಾಖೆ ಇವರುಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಡಾ. ಸುಧಾರಣೆ ಅವರು ನೆರವೇರಿಸಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಸಿಬ್ಬಂದಿ ವರ್ಗದವರು ಮತ್ತು 150 ರೈತ ಮಹಿಳೆಯರು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.