ವರದಿ ಮಂಜುನಾಥ್ ಶೆಟ್ಟಿ

ಸರ್ಕಾರಿ ಇಲಾಖೆಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಅಡಿಯಲ್ಲಿ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪ್ಲಾ ನಾಯ್ಕ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪ್ಲಾ ನಾಯ್ಕ ಮನೆ, ಕಚೇರಿ ಮತ್ತಿತರ ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಶಿವಮೊಗ್ಗ ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತರು, ಬಸವನಗುಡಿಯ ಮನೆ, ಶಿವಮೊಗ್ಗದ ಕಚೇರಿ ಬೆಂಗಳೂರಿನ ಕೆಂಗೇರಿಯಲ್ಲಿರುವ ನಾಯ್ಕರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಮತ್ತು ತಂಡದ ನೇತೃತ್ವದಲ್ಲಿ ದಾಳಿ ನಡೆದಿದೆ. ಪ್ರತ್ಯೇಕ ತಂಡಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿರುವ ದಾಖಲೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *