ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕ ಸುರಕ್ಷತೆಯ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಕುರಿತು ಸದನದ ಗಮನ ಸೆಳೆಯಲಾಯಿತು.

ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ಮಹಾನಗರದ ವ್ಯಾಪ್ತಿಯಲ್ಲಿ, ವಿಶೇಷವಾಗಿ ನಗರದ ಹೊರವಲಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸವಾಲಾಗಿ ಪರಿಣಮಿಸಿದೆ. ಸಿಬ್ಬಂದಿ ಕೊರತೆಯಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದರ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಲಾಯಿತು.

“ಶಿವಮೊಗ್ಗವು ವಿಸ್ತಾರವಾಗಿ ಬೆಳೆಯುತ್ತಿದ್ದರೂ, ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿಯ ನಿಯೋಜನೆಯಾಗಿಲ್ಲ. ಈ ಅಸಮತೋಲನವು ನಾಗರಿಕರ ಸುರಕ್ಷತೆಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಅಪರಾಧ ಕೃತ್ಯಗಳಿಗೆ ಎಡೆಮಾಡಿಕೊಟ್ಟಂತಾಗಿದೆ,” ಎಂದು ವಿಷಯ ಮಂಡಿಸಲಾಯಿತು.

ನಗರದ ಜನತೆಯ ಶಾಂತಿ ಮತ್ತು ಸುದೃಢ ಕಾನೂನು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು, ಜಿಲ್ಲೆಯಲ್ಲಿ ಖಾಲಿ ಇರುವ ಎಲ್ಲಾ ಪೊಲೀಸ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕೆಂದು ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಸದನದ ಮೂಲಕ ಒತ್ತಾಯಿಸಲಾಯಿತು.

ನಾಗರಿಕರ ಹಿತರಕ್ಷಣೆ ಮತ್ತು ಸುರಕ್ಷಿತ ಶಿವಮೊಗ್ಗದ ನಿರ್ಮಾಣಕ್ಕಾಗಿ ಸರ್ಕಾರವು ಈ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು.

Leave a Reply

Your email address will not be published. Required fields are marked *