ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಈಶ್ವರಪ್ಪನವರು ಕೊರೋನ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ. ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿದ್ದವು. ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ ನೀಡಬೇಕಾದ ಅಗತ್ಯವಿದೆ. ಹಾಗಾದಾಗ ಸೋಂಕು ಹತೋಟಿಗೆ ಬರುವ ಸಾಧ್ಯತೆ ಇದೆ ಎಂದವರು ಅಭಿಪ್ರಾಯಪಟ್ಟರು.ವೀಡಿಯೋ ಸಂವಾದದಲ್ಲಿ ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ಅತೀಕ್ ಅಹ್ಮದ್ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್ ಸೇರಿದಂತೆ ಬೆಂಗಳೂರು ಮತ್ತು ಮೈಸೂರು ವಿಭಾಗಗಳ ವ್ಯಾಪ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯನಿರ್ವಾಹಕ ಅಧಿಕಾರಿಗಳು ಪಿಡಿಒಗಳು ಭಾಗವಹಿಸಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ.