ಮಂಜುನಾಥ್ ಶೆಟ್ಟಿ…
ದೇಶ್ ನೀಟ್ ಅಕಾಡೆಮಿ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ “ದೇಶ್ ಸಿಂಧೂರ್ ಸಂಭ್ರಮ–2025” ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಖ್ಯಾತ ನರರೋಗ ತಜ್ಞರಾದ ಡಾ. ನಾರಾಯಣ ಪಂಜಿ, ಖ್ಯಾತ ಚಲನಚಿತ್ರ ನಟಿ ಪ್ರೇಮಾ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಕಾಂತೇಶ, ದೇಶ್ ನೀಟ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಅವಿನಾಶ್, ಎಚ್ಚರಿಕೆ ಪತ್ರಿಕೆಯ ಸಂಪಾದಕರಾದ ಶ್ರೀ ಸೂರ್ಯನಾರಾಯಣ ರವರು ಸೇರಿದಂತೆ ಅನೇಕ ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.