ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ.ಶಿವಮೊಗ್ಗ ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಇರುವ ಪಾವನ ಕನ್ನಡ ದಿನಪತ್ರಿಕೆ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕದ ಕಛೇರಿಯಲ್ಲಿ, ಕನ್ನಡ ಜನಮನ ರಕ್ಷಣಾ ವೇದಿಕೆ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ ಜನಾರ್ಧನ ಸಾಲಿಯಾನ್ ರವರು ದ್ವಜಾರೋಹಣ ನೆರವೇರಿಸುವ ಮೂಲಕ 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕಾ ವಿತರಕರ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್, ಮಾಲತೇಶ್ ರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ರಾಮು ಜಿ , ಸಂಘಟನಾ ಕಾರ್ಯದರ್ಶಿ ಪರಶುರಾಮ್ ರಾವ್ ಭದ್ರಾವತಿ, ನಿರ್ದೇಶಕರು ಹರ್ಷ ಎನ್ಜಿ, ಆರ್, ಸದಸ್ಯರಾದ ಯೋಗೇಶ್ ಪಿ, ದುರ್ಘೋಜಿ, ಪ್ರಾಣೇಶ್, ಧನಂಜಯ್, ಹಾಗೂ ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಜಿಲ್ಲಾ ಉಸ್ತುವಾರಿಗಳಾದ ಕಿರಣ್ ಕೆ, ಉಪಾಧ್ಯಕ್ಷ ರಾದ ವೀಣಾ ಎಚ್, ಸುಮಾ ಕೆ, ಎಸ್, ಪುಷ್ಪಾ ಎ ರಾಮು ವಿ, ಸಂಗೇಶ್ವರ, ಅಶೋಕ್,ಇನ್ನು ಮತ್ತಿತರರು ಪಾಲ್ಗೊಂಡಿದ್ದರು.