ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿವಿಧ ಪ್ರಕೋಷ್ಠ ಜಿಲ್ಲಾ ಸಮಿತಿ ಸಭೆಯನ್ನು ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಂ.ಬಿ.ಭಾನುಪ್ರಕಾಶ್ ಉದ್ಘಾಟಿಸಿ ಮುಂದಿನ ಸಂಘಟನೆ ಬಗ್ಗೆ ಮಾತಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ವಹಿಸಿ ಮಾತಾಡಿದರು.

ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ವಿಭಾಗ ಸಂಘಟನಾ ಕಾರ್ಯದರ್ಶಿ ಗಣೇಶ್ ರಾಯರು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಲೋಕೇಶ್ ಹಾಗೂ ವಿಭಾಗ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜು, ಬಿ.ಕೆ.ಶ್ರೀನಾಥ್, ಧರ್ಮ ಪ್ರಸಾದ್ ಹಾಗೂ, ಜಿಲ್ಲಾ ಎಲ್ಲಾ ಪ್ರಕೋಷ್ಟಗಳ ಸಂಚಾಲಕರು, ಸಹ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಸಾಂಸ್ಕೃತಿಕ ಪ್ರಕೋಷ್ಟದ ಸಂಚಾಲಕರಾದ ಶ್ರೀಮತಿ ಸಹನಾ ಚೇತನ್ ಗೀತೆಯನ್ನು ಹಾಡಿದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153