ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಜಿಲ್ಲೆಯ ಕಾಚಿನಕಟ್ಟೆ ನಾಗರಾಜ್ ಬಿ.ಎಂ. ಎಂಬುವವರು ಸಂತೇ ಕಡೂರು ಕೆನರಾ ಬ್ಯಾಂಕ್ ಶಾಖೆ, ಮಲ್ಲಿಗೆನಹಳ್ಳಿ ಲೀಡ್ ಬ್ಯಾಂಕ್ ಚೇರ್ಮನ್ ಮತ್ತು ಶಿವಮೊಗ್ಗ ಗೋಪಿಸರ್ಕಲ್ ಕರ್ನಾಟಕ ಬ್ಯಾಂಕ್ ಮೇನ್ ಬ್ರಾಂಚ್ ವ್ಯವಸ್ಥಾಪಕರು ಇವರುಗಳ ವಿರುದ್ಧ ಕರ್ನಾಟಕ ಬ್ಯಾಂಕ್ನ ರೂ. 5.50 ಲಕ್ಷ ಚೆಕ್ನ್ನು ಕೆನರಾ ಬ್ಯಾಂಕ್ಗೆ ಸಲ್ಲಿಸಿದ್ದು, ಖಾತೆಯಲ್ಲಿ ರೂ. 55,000 ಗಳನ್ನು ಮಾತ್ರ ಜಮಾ ಮಾಡಿ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ವಕೀಲರ ಮೂಲಕ ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಎದುರುದಾರರಿಂದ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ದೂರುದಾರರು 2024ರ ಜುಲೈನಲ್ಲಿ ಕೆನರಾ ಬ್ಯಾಂಕ್ನ ತಮ್ಮ ಖಾತೆಗೆ ರೂ. 5.50 ಲಕ್ಷ ಮೊತ್ತ ಕರ್ನಾಟಕ ಬ್ಯಾಂಕ್ ಚೆಕ್ನ್ನು ವರ್ಗಾವಣೆಗಾಗಿ ಸಲ್ಲಿಸಿದ್ದು, ಖಾತೆಯಲ್ಲಿ ರೂ. 55,000/- ಗಳನ್ನು ಮಾತ್ರ ಜಮಾ ಮಾಡಿರುತ್ತಾರೆ. ಈ ಕುರಿತು ಅನೇಕ ಸಲ ಪತ್ರ ವ್ಯವಹಾರ ಮಾಡಿ ಉಳಿದ ಮೊತ್ತ 4,95,000/-ಗಳನ್ನು ಜಮಾ ಮಾಡುವಂತೆ ಕೇಳಿಕೊಂಡರೂ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.
ಆಯೋಗವು ದೂರನ್ನು ದಾಖಲಿಸಿಕೊಂಡು ಮೂರು ಎದುರುದಾರರಿಗೆ ನೋಟೀಸ್ ನೀಡಿದ್ದು, ಎದುರುದಾರರು ತಮ್ಮ ವಕೀಲರ ಮೂಲಕ ಹಾಜರಾಗಿ ಕೆನರಾ ಬ್ಯಾಂಕ್ ತಮ್ಮ ತಕರಾರಿನಲ್ಲಿ ದೂರುದಾರರ ಚೆಕ್ನ್ನು ಕರ್ನಾಟಕ ಬ್ಯಾಂಕ್ ಶಾಖೆಗೆ ಚೆಕ್ ಮೊತ್ತವನ್ನು ಕಳುಹಿಸಲು ಸಲ್ಲಿಸಿದ್ದು, ಅಲ್ಲಿಂದ ರೂ. 55,000/- ಗಳನ್ನು ಮಾತ್ರ ಕಳುಹಿಸಿರುತ್ತಾರೆ. ಉಳಿಕೆ ವ್ಯತ್ಯಾಸದ ಮೊತ್ತವನ್ನು ಕಳುಹಿಸಲು ಪತ್ರ ಸಲ್ಲಿಸಿರುತ್ತೇವೆ. ಆದ್ದರಿಂದ ಕೆನರಾ ಬ್ಯಾಂಕ್ನಿಂದ ಯಾವುದೇ ಸೇವಾ ನ್ಯೂನ್ಯತೆಯಾಗಿರುವುದಿಲ್ಲ ಎಂದು ಹೇಳಿರುತ್ತಾರೆ.