ಮಂಜುನಾಥ್ ಶೆಟ್ಟಿ…


ನಂಜಪ್ಪ ಆಸ್ಪತ್ರೆ ಎಂಡಿ ಶ್ರೀಯುತ ಡಿ ಜಿ ಬೆನಕಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಡಾ ರತ್ನಾಕರ್ ಮತ್ತು ಡಾ ಕೆ ವಿ ಕಾಮತ್ ಉದ್ಘಾಟಿಸಿದರು.
ರೋಟರಿ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ 100ಕೂ ಹೆಚ್ಚು ದಾನಿಗಳು ರಕ್ತವನ್ನು ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
