ಮಂಜುನಾಥ್ ಶೆಟ್ಟಿ…
DCM ಡಿಕೆ.ಶಿವಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ನಾಟಿ ಕೋಳಿ ಬಿರಿಯಾನಿ ವಿತರಣೆ ಮಾಡಲಾಯಿತು.
ನಗರದ ಮೆಗ್ಗಾನ್ ಆಸ್ಪತ್ರೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಸಾರ್ವಜನಿಕರಿಗೆ ಮತ್ತು ರೋಗಿಗಳ ಸಂಬಂಧಿಕರಿಗೆ ದೇವಿಗೆ ನಾಟಿ ಕೋಳಿ ನೈವೇದ್ಯ ಮಾಡಿ ಪ್ರಸಾದ ಮೂಲಕ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.ದೇವಿಗೆ ವಿಶೇಷ ಪೂಜೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಶಿವಾನಂದ ಶೆಟ್ಟಿ ಕವಿತಾ ರಾಘವೇಂದ್ರ ಕುಮಾರ್ ವಿನಯ್ ತಾನ್ಲೆ ಪುರಲೆ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.