ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರದ ಅಕ್ಕಮಹಾದೇವಿ ಸರ್ಕಲ್ (ಉಷಾ ನರ್ಸಿಂಗ್ ಹೋಂ ಸರ್ಕಲ್) ನಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸರ್ಕಲ್ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಸಿಪಿಐ ದೇವರಾಜ್ ಅವರು ಟ್ರಾಫಿಕ್ ಐಲ್ಯಾಂಡ್ ಹಾಗೂ ಶಾಶ್ವತ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಕೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ಸಾರ್ವಜನಿಕ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಟ್ರಾಫಿಕ್ ಐಲ್ಯಾಂಡ್ ಮತ್ತು ಟ್ರಾಫಿಕ್ ಸಿಗ್ನಲ್ ಲೈಟ್ಗಳನ್ನು ಸಮರ್ಪಕವಾಗಿ ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಯಿತು.ಮತ್ತು ಪ್ರಸುತ್ತ ವಾಹನಗಳ ಸುಗಮ ಸಂಚಾರಕ್ಕೆ ಫ್ರೀ ಲೆಫ್ಟ್ ಮಾಡಲು ತಾತ್ಕಾಲಿವಾಗಿ ಬ್ಯಾರೀಕೆಡ್ ಅಳವಡಿಸಲಾಯಿತು.