ಮಂಜುನಾಥ ಶೆಟ್ಟಿ…

ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಸಾರ್ವಜನಿಕರಿಂದ ನಿರಂತರವಾಗಿ ಬಂದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿ ದಾಖಲೆಗಳು, ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ದಾಳಿಯ ವೇಳೆ ಕಚೇರಿಯಲ್ಲಿ ಸೇವೆ ಪಡೆಯಲು ಬಂದಿದ್ದ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಲೋಕಾಯುಕ್ತ ತಂಡ, ಕೆಲಸಗಳ ವಿಳಂಬ, ಮಧ್ಯವರ್ತಿಗಳ ಹಾವಳಿ ಹಾಗೂ ಲಂಚದ ಆರೋಪಗಳ ಬಗ್ಗೆ ಮಾಹಿತಿ ಕಲೆಹಾಕಿತು. ಕೆಲ ದಾಖಲೆಗಳನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಚೇರಿಯ ವಿವಿಧ ಶಾಖೆಗಳಲ್ಲಿ ಅರ್ಜಿಗಳ ವಿಲೇವಾರಿ, ಪ್ರಮಾಣಪತ್ರಗಳ ಮಂಜೂರಾತಿ ಹಾಗೂ ಕಡತಗಳ ನಿರ್ವಹಣೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಆಡಳಿತಾತ್ಮಕ ಕ್ರಮಗಳನ್ನು ಅನುಸರಿಸಲಾಗುತ್ತಿದೆಯೇ ಎಂಬುದನ್ನು ಗಮನಿಸಿದರು.

Leave a Reply

Your email address will not be published. Required fields are marked *