ಮಂಜುನಾಥ ಶೆಟ್ಟಿ…
ಘನತೆಯಿಂದ ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಕುಶಲಕರ್ಮಿಗಳ ಕರಕುಶಲ ಪರಂಪರೆಯನ್ನು ಉಳಿಸುವುದರ ಜೊತೆಗೆ, ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕುಶಲಕರ್ಮಿಗಳ ಆದಾಯವನ್ನು ಹೆಚ್ಚಿಸುವುದು ಮತ್ತು ಅವರಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು ಅತಿ ಮುಖ್ಯವಾಗಿದೆ ಎಂದು ಎನ್ ಇ ಎಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಡಾ.ಪಿ.ನಾರಾಯಣ್ ಹೇಳಿದರು.
ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಅಧೀನದ ಬೆಂಗಳೂರಿನ ಎಂಎಸ್ಎAಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜೆ.ಎನ್.ಎನ್.ಸಿ.ಇ ಕಾಲೇಜಿನ ಸಹಯೋಗದಲ್ಲಿ ಗುರುವಾರ ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ‘ವಿಶ್ವಕರ್ಮ ಯೋಜನೆಯಡಿ ಬ್ರ್ಯಾಂಡಿAಗ್ ಮತ್ತು ಮಾರ್ಕೆಟಿಂಗ್’ ಕುರಿತಾದ ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಪ್ರದಾಯಿಕ ಕುಶಲಕರ್ಮಿಗಳು ಹಾಗೂ ಕರಕುಶಲ ವೃತ್ತಿದಾರರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೌಶಲ್ಯಕ್ಕೆ ಅತಿ ಹೆಚ್ಚಿನ ಮಹತ್ವ ಇದೆ. ಹಿಂದೆಲ್ಲ ಕೌಶಲ್ಯ ವಂಶಪಾರAಪರ್ಯವಾಗಿ ಬರುತ್ತಿತ್ತು. ಈಗ ಹಾಗಿಲ್ಲ. ಕೌಶಲ್ಯದಲ್ಲ್ಲಿ ಉತ್ಸುಕತೆ ಇರುವವರಿಗೆ ಕಲಿಯುವ, ಅದರಲ್ಲಿ ತೊಡಗಿಸಿಕೊಳ್ಳುವ ವ್ಯವಸ್ಥೆ ಇದೆ. ಸರ್ಕಾರ ಕುಶಲಕರ್ಮಿಗಳಿಗಾಗಿ ಮೂಲಭೂತ ವ್ಯವಸ್ಥೆ, ಬ್ಯಾಂಕ್ ಸಾಲ, ಸಬ್ಸಿಡಿ ಮೂಲಕ ಆರ್ಥಿಕ ಸಬಲೀಕರಣ, ತರಬೇತಿ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಸಹ ನೀಡುತ್ತಿದ್ದು ಕುಶಲಕರ್ಮಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಜೆಎನ್ಎನ್ಸಿಇ ಕಾಲೇಜು ಆರಂಭವಾಗಿ 46 ವರ್ಷಗಳಾಗಿದ್ದು ಅನೇಕ ಅತ್ಯುತ್ತಮ ಇಂಜಿನಿಯರ್ಗಳನ್ನು ಸೃಷ್ಟಿಸುತ್ತಾ ದೇಶ ಕಟ್ಟುವ ಕೆಲಸ ಮಾಡುತ್ತಿದೆ. ವಿದ್ಯೆ ಜೊತೆ ವೃತ್ತಿ ಕೌಶಲ್ಯ ನೀಡಲು ಸಹ ಸಂಸ್ಥೆ ಮುಂದಾಗಿದೆ. ವಿದ್ಯೆಯನ್ನು ಅನುಷ್ಠಾನಗೊಳಿಸಲು ಕೌಶಲ್ಯ ಬೇಕೇಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಜೋಡಿಸಿ ನಿಮ್ಮನ್ನು ವಿಶ್ವಕರ್ಮಿಗಳನ್ನಾಗಿ ಮಾಡಿದೆ. ತಮ್ಮ ಕಾಯಕದಿಂದ ಸಮಾಜ ಸುಸ್ಥಿತಿಯಲ್ಲಿಡುವ ಕೆಲಸ ಮಾಡುತ್ತಿರುವ ಕುಶಲಕರ್ಮಿಗಳು ಯೋಜನೆಗಳ ಪ್ರಯೋಜನ ಪಡೆದು ಅಭಿವೃದ್ದಿ ಸಾಧಿಸಬೇಕೆಂದು ಆಶಿಸಿದರು.
ಎಂಎಸ್ಎAಇ ಡಿಎಫ್ಓ, ಸಹಾಯಕ ನಿರ್ದೇಶಕರಾದ ಶಿವಕುಮಾರ್ ಮಾತನಾಡಿ, ಪಿಎಂ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ರೂ.3 ಲಕ್ಷದವರೆಗೆ ಶೇ.5 ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರಕಲಿದೆ. ಪಿಎಂಇಜಿಪಿ ಯೋಜನೆಯಡಿ ಶೇ.15 ರಿಂದ 30 ಸಬ್ಸಿಡಿಯೊಂದಿಗೆ ರೂ.50 ಲಕ್ಷದವರೆಗೆ ಸಾಲ ಸೌಲಭ್ಯ ದೊರೆಯಲಿದೆ. ಬ್ಯಾಂಕುಗಳ ತಮ್ಮ ಕೌಶಲ್ಯದ ಆಧಾರದ ಮೇಲೆ ಸಾಲ ನೀಡಲಿದ್ದು, ಕೌಶಲ್ಯವನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಂಡು ಸಾಲ ಪಡೆದ ಉದ್ದೇಶಕ್ಕಾಗಿಯೇ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ಈ ಯೋಜನೆಯಡಿ ನೊಂದಾಯಿತರಾದ ಸಾಂಪ್ರದಾಯಿಕ ಕುಶಲಕರ್ಮಿಗಳು ತಮ್ಮ ಉತ್ಪನ್ನಗಳನ್ನು ಕೇವಲ ಸ್ಥಳೀಯ ಮಾರುಕಟ್ಟೆಗೆ ಸೀಮಿತಗೊಳಿಸದೆ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಪರಿಚಯಿಸಿ ಹೆಚ್ಚಿನ ಆದಾಯ ಗಳಿಸುವಂತೆ ಮಾಡುವುದು ಈ ತರಬೇತಿಯ ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯಕ್ರಮದ ಮೂಲಕ ಕುಶಲಕರ್ಮಿಗಳಿಗೆ ಮಾರುಕಟ್ಟೆ ತಂತ್ರಗಳು, ಬ್ರ್ಯಾಂಡಿAಗ್, ಪ್ಯಾಕೇಜಿಂಗ್, ಡಿಜಿಟಲ್ ಮಾರ್ಕೆಟಿಂಗ್ ಹಾಗೂ ರಫ್ತು ಪ್ರಕ್ರಿಯೆಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಸುರೇಶ್ ಕುಮಾರ್ ಮಾತನಾಡಿ, ಕುಶಲಕರ್ಮಿಗಳಿಗೆ ಬ್ರಾö್ಯಂಡಿAಗ್ ಮತ್ತು ಪ್ಯಾಕೇಜಿಂಗ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಈ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಅನೇಕ ಕುಶಲಕರ್ಮಿಗಳು ತರಬೇತಿ ಪಡೆದು ಕುಶಲಕರ್ಮಿ ಎಂಬ ಪ್ರಮಾಣಪತ್ರ ಪಡೆಯುತ್ತಿದ್ದಾರೆ. ಹಲವರು ಬ್ಯಾಂಕ್ ಸಾಲ ಪಡೆಯುವುದು ಕಷ್ಟವೆಂದು ದೂರುತ್ತಿದ್ದು, ಕುಶಲಕರ್ಮಿಗಳು ತಮ್ಮ ಕೌಶಲ್ಯ ಕುರಿತು ಯೋಜನಾ ವರದಿಯನ್ನು ತಯಾರಿಸಿಕೊಂಡು ಬ್ಯಾಂಕ್ನವರಿಗೆ ಮಾಹಿತಿ ನೀಡಿದರೆ, ಬ್ಯಾಂಕ್ ಸಾಲ ದೊರೆಯುವುದು ಸುಲಭವಾಗುತ್ತದೆ.
18 ವರ್ಷ ಮೇಲ್ಪಟ್ಟವರು ಪಿಎಂಇಜಿಪಿ ಯೋಜನೆಯಡಿ ಉತ್ಪಾದನೆ ಮತ್ತು ಸೇವಾ ವಲಯದಡಿ ಸಾಲ ಸೌಲಭ್ಯ ಪಡೆಯಬಹುದು.
ನಗರ ಪ್ರದೇಶಕ್ಕೆ ಶೇ.15 ಮತ್ತು ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಶೇ.25 ಹಾಗೂ ಎಸ್ಸಿ, ಎಸ್ಟಿ, ಮಹಿಳೆಯರಿಗೆ ಶೇ.35 ಸಬ್ಸಿಡಿಯಲ್ಲಿ ಸಾಲ ಸೌಲಭ್ಯ ಸಿಗಲಿದೆ ಎಂದರು.
ನಮ್ಮ ಸ್ಥಳೀಯ ಸಣ್ಣ ಸಣ್ಣ ಉದ್ಯಮಿಗಳು ಸಾಕಷ್ಟು ಉತ್ತಮ ಉತ್ಪನ್ನಗಳನ್ನು ತಯಾರಿಸುತ್ತಾ ಸಾಧನೆ ಮಾಡಿದ್ದಾರೆ. ಉತ್ತಮ ಮಾರುಕಟ್ಟೆ ಮೌಲ್ಯ ಸಿಗಲು ಆಕರ್ಷಕ ಪ್ಯಾಕೇಜಿಂಗ್, ಲೇಬಲಿಂಗ್ ಮತ್ತು ಸ್ವಂತ ಬ್ರ್ಯಾಂಡ್ ನಿರ್ಮಾಣ ಮತ್ತು ಉತ್ಪನ್ನ ರಫ್ತು ಮಾಡುವ ಬಗ್ಗೆ ಸಾಕಷ್ಟು ಮಾಹಿತಿ ಬೇಕಿದ್ದು, ಈ ತರಬೇತಿಯಲ್ಲಿ ನೀಡಲಾಗುವುದು ಎಂದರು.
ಜೆಎನ್ಎನ್ಸಿಇ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ವಿಶ್ವಕರ್ಮ ಉತ್ಪನ್ನಗಳ ರಫ್ತು ಪ್ರೋತ್ಸಾಹ ಮತ್ತು ಮಾರುಕಟ್ಟೆ ವಿಸ್ತರಣೆಗೆ ಈ ತರಬೇತಿ ಕಾರ್ಯಕ್ರಮವು ಅತ್ಯಂತ ಸಹಕಾರಿಯಾಗಲಿದ್ದು, ಬ್ರಾö್ಯಂಡಿAಗ್ ಮತ್ತು ಪ್ಯಾಕೇಜಿಂಗ್ ಬಗ್ಗೆ ಉತ್ತಮ ಮಾಹಿತಿ ಲಭಿಸಲಿದೆ. ಉತ್ಪಾದಕರು, ಉದ್ಯಮಿಗಳು ತಮ್ಮ ಉತ್ಪನ್ನಗಳಿಂದ ಲಾಭ ಪಡೆಯುವುದು ಹೇಗೆ ಮತ್ತು ಇತರರಿಗಿಂತ ಹೇಗೆ ಭಿನ್ನವಾಗಿದ್ದೇನೆ ಎಂಬುದನ್ನು ಕಂಡುಕೊಳ್ಳಬೇಕು.
ಇಲ್ಲಿನ ಅನೇಕ ಸ್ಥಳೀಯ ಕೈಗಾರಿಕೆಗಳು ಅತ್ಯುತ್ತಮ ಸಾಧನೆ ಮಾಡಿವೆ. ಅತ್ಯಂತ ಸಣ್ಣ ಉತ್ಪನ್ನವಾದ ಸೇಫ್ಟಿಪಿನ್ ಹೆಚ್ಚಿನ ರಾಯಲ್ಟಿ ಪಡೆಯುತ್ತಿರುವ ಉತ್ಪನ್ನವಾಗಿದೆ. ಆದ್ದರಿಂದ ನನ್ನ ಉತ್ಪನ್ನ ಸಣ್ಣದು, ಮಹತ್ವದ್ದಲ್ಲವೆಂದು ಯೋಚಿಸಬಾರದು, ಶ್ರದ್ದೆಯಿಂದ ಉತ್ಪನ್ನಗಳನ್ನು ತಯಾರಿಸಬೇಕು ಎಂದು ಸಲಹೆ ನೀಡಿದರು.
ಅರುಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕುಶಲಕರ್ಮಿಗಳು ಸ್ವಂತ ಉದ್ಯೋಗದ ಮೂಲಕ ಸಬಲರಾಗಬೇಕೆಂಬ ಉದ್ದೇಶದಿಂದ ಈ ತರಬೇತಿಯನ್ನು ಆಯೋಜಿಸಲಾಗಿದ್ದು, ಸರ್ಕಾರದ ಸವಲತ್ತುಗಳನ್ನು ಪಡೆಯುವ ಬಗ್ಗೆ ಮಾಹಿತಿ ನೀಡಲಾಗುವುದು. ಈ ಯೋಜನೆಯಡಿ ನೋಂದಣಿಯಾಗಿ ತರಬೇತಿ ಪಡೆದು, ಪರೀಕ್ಷೆಯ ಮೂಲಕ ಅರ್ಹತೆ ಪಡೆದ ನಂತರ ಕಡಿಮೆ ಬಡ್ಡಿ ದರದಲ್ಲಿ ರೂ. 2 ರಿಂದ 3 ಲಕ್ಷ ಸಾಲ ಸೌಲಭ್ಯ, 4 ಸಾವಿರ ಸ್ಟೈಫಂಡ್ ಮತ್ತು ರೂ.15 ಸಾವಿರ ಮೌಲ್ಯದ ಟೂಲ್ ಕಿಟ್ ನೀಡಿ ನಂತರ ಮುಂದುವರೆದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಕ್ಷೇತ್ರಗಳ ತಜ್ಞರು ಸಾಂಪ್ರದಾಯಿಕ ವೃತ್ತಿಗಳನ್ನು ಇಂದಿನ ಆಧುನಿಕ ಮಾರುಕಟ್ಟೆಗೆ ತಕ್ಕಂತೆ ಹೇಗೆ ಬದಲಾಯಿಸಿಕೊಳ್ಳಬೇಕು ಎಂಬುದರ ಕುರಿತು ಮಹತ್ವದ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೊದಲ ಹಂತದ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಜೋಯ್ಸ್ ರಾಮಾಚಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಂಎಸ್ಎAಇ ಡಿಎಫ್ಓ, ಸಹಾಯಕ ನಿರ್ದೇಶಕರಾದ ಮರೋತಿ ಸುಬೆ, ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ, ಬ್ಯಾಂಕ್ ಅಧಿಕಾರಿಗಳು, ಕುಶಲಕರ್ಮಿಗಳು, ವಿದ್ಯಾರ್ಥಿಗಳು ಹಾಜರಿದ್ದರು.