ಮಂಜುನಾಥ ಶೆಟ್ಟಿ…

ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಜಿಲ್ಲಾಧ್ಯಕ್ಷರಾದ ಮಧು ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಳೆದ ನಾಲ್ಕು ತಿಂಗಳಿನಿಂದ ವೃದ್ಧರ ವೃದ್ಯಾಪ ವೇತನ ಬಾರದೇ ಇರುವುದು ಮತ್ತು ಈ  ವಿಚಾರಕ್ಕೆ ಸಂಬಂಧಿಸಿದಂತೆ ವೃದ್ಧರು ಸಂಬಂಧಪಟ್ಟಂತ ತಾಲೂಕು ಕಚೇರಿಗಳಿಗೆ ಬೆಳಗ್ಗೆಯಿಂದ ಸಂಜೆ ತನಕ ಅಲೆದಾಡುತ್ತಿರುವುದನ್ನು ವೀಕ್ಷಿಸಿ ಸಂಬಂಧಪಟ್ಟಂತ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಶಿವಮೊಗ್ಗ ಜಿಲ್ಲೆಯಲ್ಲಿ 5559 ಪಿಂಚಣಿದಾರರನ್ನು ಏಕಾಏಕಿ ರದ್ದು ಪಡಿಸಿರುವುದು ಕಂಡು ಬಂದಿರುತ್ತದೆ.

ವಿಚಾರವನ್ನು ಸಂಬಂಧಪಟ್ಟಂತ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ವಯಸ್ಸಾದ ವೃದ್ಧರ ವೃದ್ಧಾಪಿವೇತನ ಬಿಡುಗಡೆ ಮಾಡಬೇಕು ಮತ್ತು ವಯಸ್ಸಾದ ವೃದ್ಧರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಮುಖಂಡರು ಕಾರ್ಯಕರ್ತ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *