ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ನಗರದ ದೀನದಯಾಳು ರಸ್ತೆಯಲ್ಲಿರುವ ಅಂಗಡಿ ಮಾಲೀಕರು ಹಾಗೂ ವರ್ತಕರ ಸಭೆಯನ್ನು ನಡೆಯಿತು.
ಸಭೆಯಲ್ಲಿ ದೀನದಯಾಳು ರಸ್ತೆಗೆ ಹೊಂದಿಕೊಂಡಿರುವ ಕನ್ಸರ್ವೆನ್ಸಿ ಸ್ಥಳಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ವಾಹನಗಳನ್ನು ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವಂತೆ ತಿಳಿಸಲಾಯಿತು. ಸದರಿ ರಸ್ತೆಯಲ್ಲಿ ದಿನ ಬಿಟ್ಟು ದಿನ ಪಾರ್ಕಿಂಗ್ ವ್ಯವಸ್ಥೆ ಜಾರಿಯಲ್ಲಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಈ ವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಯಿತು.
ಅಲ್ಲದೇ, ಅಂಗಡಿ ಮಾಲೀಕರು ಹಾಗೂ ವರ್ತಕರು ರಸ್ತೆ ಸಂಚಾರಕ್ಕೆ ಯಾವುದೇ ರೀತಿಯಲ್ಲಿ ಅಡಚಣೆ ಉಂಟು ಮಾಡದಂತೆ ಹಾಗೂ ಸಾರ್ವಜನಿಕರು ಮತ್ತು ವಾಹನ ಸವಾರರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸಲಾಯಿತು.