ಕರ್ನಾಟಕ ಕುಂಬಾರರ ಯುವ ಸೈನ್ಯ ರಾಜ್ಯಾಧ್ಯಕ್ಷ ರಾದ ಶಂಕರ್ ಶೆಟ್ಟಿ ಕುಂಬಾರ್ ರವರು ಮಾತನಾಡಿ ರಾಜ್ಯ ಸರ್ಕಾರವು ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಆದರೆ ಪ್ಯಾಕೇಜ್ ಗೆ ಮಾರ್ಗಸೂಚಿ ಬಿಡುಗಡೆ ಮಾಡದೆ ಗೊಂದಲವನ್ನು ಸೃಷ್ಟಿಸಿದೆ. ಬರೀ ಪ್ಯಾಕೇಜ್ ಬಿಡುಗಡೆ ಮಾಡುವುದೇ ಅಲ್ಲದೆ ಅದನ್ನು ಕಾರ್ಯಗತಗೊಳಿಸಬೇಕು. ಅಸಂಘಟಿತ ವಲಯಕ್ಕೆ ನೆರವಿನ ಅಗತ್ಯ ಬಹುತೇಕವಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡದೇ ಇರುವುದು ದುರದೃಷ್ಟಕರ. ಈ ಕೂಡಲೇ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ