ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ಅಶೀರ್ವಾದದೊಂದಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಶಿವಮೊಗ್ಗ ಹಾಗೂ ಚುಂಚಾದ್ರಿ ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ, ಶಿವಮೊಗ್ಗ ಇದರ ವತಿಯಿಂದ ಇಂದು ಶಿವಮೊಗ್ಗ ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ 18 ವರ್ಷ ಮೇಲ್ಪಟ್ಟ ನೂರಾರು ಸಂಖ್ಯೆಯ ಜನರಿಗೆ ಮೊದಲನೇ ಹಾಗೂ ಎರಡನೇ ಡೋಸ್ ಉಚಿತ ಕೋವಿಡ್ ಲಸಿಕೆ ಯನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀ ಚೇತನ್ ಗೌಡರವರು, ಚುಂಚಾದ್ರಿ ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ, ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀಮತಿ ಶಾರದಾ ಶೇಷಗಿರಿ ಗೌಡರವರು, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಶ್ರೀಮತಿ ಯಮುನಾ ರಂಗೇಗೌಡರವರು, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ರಮೇಶ್ ಹೆಗ್ಡೆರವರು, ಮೆಸ್ಕಾಂ ನಿರ್ದೇಶಕರಾದ ಶ್ರೀ ದಿನೇಶ್ ರವರು, ಆದಿಚುಂಚನಗಿರಿ ಮಠದ ವ್ಯವಸ್ಥಾಪಕರಾದ ಶ್ರೀ ಅಮೀಶ್ ರವರು, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಪ್ರತಿಮಾ ಡಾಕಪ್ಪಗೌಡರವರು, ಸೂರ್ಯ ಕಾಲೇಜ್ ಆಫ್ ನರ್ಸಿಂಗ್ ನ ಅಧ್ಯಕ್ಷರಾದ ಶ್ರೀಮತಿ ನೇತ್ರಾವತಿರವರು ಸೇರಿದಂತೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಮತ್ತು ಚುಂಚಾದ್ರಿ ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ