ಹಸೂಡಿ ಗ್ರಾಮ ದೇವರಾದ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಹಿಂಭಾಗ ಜಾಗದಲ್ಲಿರುವ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಈ ಕೆಲ ದಿನಗಳ ಹಿಂದೆ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡಿರುವುದು ಆದರೆ ಬಸ್ಟ್ಯಾಂಡ್ ನಿರ್ಮಾಣವಾದ ಜಾಗವು ದೇವಸ್ಥಾನಕ್ಕೆ ಸಂಬಂಧಪಟ್ಟಿರುತ್ತದೆ ಬಸ್ಟ್ಯಾಂಡ್ ನಿರ್ಮಾಣಗೊಂಡ ದಿನದಿಂದಲೂ ಸಾರ್ವಜನಿಕರು ಸೇರಿದಂತೆ ಕೆಲ ಕಿಡಿಗೇಡಿಗಳು ಮಲ ಮೂತ್ರ ವಿಸರ್ಜನೆ ಹಾಗೂ ಗುಟ್ಕಾ ತಂಬಾಕು ಎಲೆ ಅಡಿಕೆ ಉಗಿದು ದೇವಸ್ಥಾನದ ಆವರಣವು ಸ್ವಚ್ಛತೆ ಇಲ್ಲದ ಕಾರಣದಿಂದಾಗಿ ಆವರಣವು ಅಪವಿತ್ರಗಳಿಸುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ ಆದ್ದರಿಂದ ನಮ್ಮ ಸಮಿತಿಯು ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ ಈ ಕೂಡಲೇ ಸೂಕ್ತ ಕ್ರಮಕೈಗೊಂಡು ಪವಿತ್ರವಾದ ಸ್ಥಳ ವನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನದ ಜಾಗದಲ್ಲಿರುವ ಬಸ್ ಸ್ಟ್ಯಾಂಡ್ ಅನ್ನು ಸ್ಥಳಾಂತರಿಸಬೇಕೆಂದು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ. ಒಂದು ವೇಳೆ ಈ ಕೂಡಲೇ ಕ್ರಮ ಕೈಗೊಂಡು ಬಸ್ಸ್ಟ್ಯಾಂಡ್ ತೆರವುಗೊಳಿಸದಿದ್ದಲ್ಲಿ ನಮ್ಮ ಸಮಿತಿಯು ಉಗ್ರ ಹೋರಾಟ ನಡೆಸಲಾಗುವುದು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153