ದೆಹಲಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಕೆಲಸ ಮಾಡುತ್ತಿದ್ದ 21 ವರ್ಷ ಪ್ರಾಯದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಹತ್ಯೆ ಘಟನೆ ಅತ್ಯಂತ ಭಯಾನಕ ಮತ್ತು ಆಘಾತಕಾರಿಯಾದದ್ದು ಈ ಕ್ರೂರ ಕೊಲೆಗಾರನಿಗೆ ಗರಿಷ್ಠ ಕಠಿಣ ಶಿಕ್ಷೆ ವಿಧಿಸಬೇಕು. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಸಮಿತಿ ಒತ್ತಾಯಿಸಿದ್ದಾರೆ. ಸ್ತನಗಳನ್ನೇ ಕತ್ತರಿಸಿ ಕುತ್ತಿಗೆಯನ್ನು ಸೀಳಾಗಿದೆ ಮತ್ತು ಆಕೆಯ ಗುಪ್ತಾಂಗಗಳನ್ನು ವಿರೂಪಗೊಳಿಸಲಾಗಿರುವುದ ವರದಿಯಾಗಿದೆ.ಆಕೆಯ ದೇಹದ ಹಲವು ಕಡೆಗಳಲ್ಲಿ ಇರಿದ ಗುರುತುಗಳಿವೆ ಎಂದು ಹೇಳಲಾಗಿದೆ ಆಗಸ್ಟ್ 26ರಂದು ಈ ಅಮಾನುಷ ಘಟನೆ ನಡೆದಿದೆ ಜಿಲ್ಲಾ ಮ್ಯಾಜಿಸ್ಟೇಟ್ ಕಚೇರಿಯಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರಗಳು ಎಗ್ಗಿಲ್ಲದೆ ನಡೆಯುತ್ತಿರುವುದು . ಈ ಕಚೇರಿ ಒಳಗೆ ಪ್ರತಿದಿನ 3ರಿಂದ 4 ಲಕ್ಷ₹ಭ್ರಷ್ಟಾಚಾರದ ಹಣವನ್ನು ಠೇವಣಿ ಇಡಲಾಗುತ್ತಿತ್ತು ಇಂತಹ ಹಣವನ್ನು ಇಡಲು ರಹಸ್ಯ ಲಾಕರ್ ರಹಸ್ಯ ಬೀಗ ದಂತಹ ಅನೇಕ ರಹಸ್ಯ ಸಂಗತಿಗಳನ್ನು ಮರೆ ಮಾಚಲು ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ . ಆಕೆಯ ಅಕ್ರಮ ಸಂಬಂಧದ ಕಾರಣಕ್ಕಾಗಿ ಆಕೆಯನ್ನು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂಬ ಶರಣಾದ ಆರೋಪಿಯ ಹೇಳಿಕೆಯನ್ನು ಮಾತ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ ಸಂತ್ರಸ್ತ ಕುಟುಂಬ ಮಾಡಿರುವ ಆರೋಪಗಳ ಬಗ್ಗೆ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ ಕೇಂದ್ರದಲ್ಲಿ ಫ್ಯಾಶಿಸ್ಟರು ಅಧಿಕಾರ ವಹಿಸಿಕೊಂಡಾಗಿನಿಂದ ಭಾರತದಲ್ಲಿ ವಿಶೇಷವಾಗಿ ದೆಹಲಿ ಮತ್ತು ಯುಪಿಯಲ್ಲಿ ಮಹಿಳೆಯರ ಘನತೆ ಗೌರವ ಮತ್ತು ಸುರಕ್ಷತೆಯೂ ಅಪಾಯದಲ್ಲಿದೆ ಅತ್ಯಾಚಾರ ಮತ್ತು ಕೊಲೆ ಕೆಲವು ಗುಂಪಿನ ಜನರ ಸವಲತ್ತು ಅಥವಾ ಹಕ್ಕು ಎಂಬುದಾಗಿದೆ. ಏಕೆಂದರೆ ಈ ಘೋರ ಅಪರಾಧ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವ ಬದಲು ಸರಕಾರ ಮತ್ತು ಅಧಿಕಾರಿಗಳು ಅವರಿಗೆ ಬೆಂಬಲ ನೀಡುತ್ತಿರುವುದು ಕಂಡುಬರುತ್ತಿದೆ ಅತ್ಯಾಚಾರಿಗಳ ಬಗ್ಗೆ ಅಧಿಕಾರಿಗಳ ಈ ನಿರ್ಲಕ್ಷ್ಯ ಮನೋಭಾವವು ಸಮಾಜ ವಿರೋಧಿಗಳನ್ನು ಇಂತಹ ಕೃತ್ಯಗಳಲ್ಲಿ ಮತ್ತೆಮತ್ತೆ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಿದಂತಾಗುತ್ತದೆ. ಪೊಲೀಸರ ನಿರ್ಲಕ್ಷ ಹಾಗೂ ಈ ಧೋರಣೆಯನ್ನು ಎಸ್ಪಿ ಪಿಐ ತೀವ್ರವಾಗಿ ಖಂಡಿಸಿದ್ದು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಹತ್ಯೆಯ ಹಿಂದಿನ ರಹಸ್ಯವನ್ನು ಭೇದಿಸುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷರಾದ ಸಲೀಂ ಖಾನ್ , ಅಲ್ಲಾಬಖಶ್ , ಜಿಲಾನ್ ಕಾನ್ , ಫೈರೋಜ್ ಖಾನ್, ಇಮ್ರಾನ್ ಅಹ್ಮದ್, ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153