ನಮ್ಮ ಸಮಾಜದ ಮಾಜಿ ಅಧ್ಯಕ್ಷರು ಮತ್ತು ಕಟ್ಟಡ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ ಇವರ ಹಿರಿಯ ಸೊಸೆ ಶ್ರೀಮತಿ ಅರ್ಚನಾ ಶೆಟ್ಟಿ ಕೋಂ ಶ್ರೀ ಆದಿತ್ಯ ಶೆಟ್ಟಿ ಇವರು ವಾಣಿಜ್ಯ ಶಾಸ್ತ್ರದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಡಾ.ಸತೀಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಉಪಾಧ್ಯಕ್ಷರಾದ ಡಾ. ವೈವಿ ಶೆಟ್ಟಿ, ಸಹಕಾರ್ಯದರ್ಶಿ ರಾಜೀವ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಮಹೇಶ್ ಶೆಟ್ಟಿ ಖಜಾಂಚಿ ಸುರೇಶ್ ಕುಮಾರ್ ಜೆ ಶೆಟ್ಟಿ, ಅರುಣ್ ಶೆಟ್ಟಿ, ದಿವಾಕರ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಎಂ ಕೆ ಸುರೇಶ್ ಕುಮಾರ್, ಕೃಷ್ಣಪ್ಪ ಶೆಟ್ಟಿ, ಬಿಎ ಸುರೇಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಡಾ.ಅರ್ಚನಾ ಶೆಟ್ಟಿ ಇವರಿಗೆ ಶುಭಾಶಯಗಳನ್ನು ಕೋರಿದ್ದಾರೆ.