ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳನ್ನು ಅತ್ಯಂತ ಚಾಣಾಕ್ಷ ತನದಿಂದ ಸೆರೆ ಹಿಡಿದ ಪೊಲೀಸ್ ಸಿಬ್ಬಂದಿಗಳನ್ನು ಪ್ರಶಂಸಿಸಿ, ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯವರು ಎರಡು ಲಕ್ಷ ರೂಪಾಯಿಗಳ ನಗದು ಬಹುಮಾನದ ಮೊತ್ತವನ್ನು ನೀಡಿದ್ದಾರೆ. ನವೋದಯ ಗ್ರಾಮ ಸೇವಾ ಸಂಸ್ಥೆಯವರು ಈ ಸಂಬಂಧ ಎರಡು ಲಕ್ಷ ರೂಪಾಯಿಗಳ ಮೊತ್ತದ ಚೆಕ್ ಅನ್ನು ಸಚಿವರಿಗೆ ಕಳುಹಿಸಿದ್ದಾರೆ. ಸಂಸ್ಥೆಯವರ ಕಾರ್ಯವನ್ನು ಮಾನ್ಯ ಸಚಿವರು ಪ್ರಶಂಸಿಸಿ, ಅಭಿನಂದಿಸಿದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153