ಶಿವಮೊಗ್ಗ ನಗರದ ವಿನೋಬನಗರದ ಆರನೇ ತಿರುವು 30ಅಡಿ ರಸ್ತೆಯಾಗಿದ್ದು, ಸದರಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರದಿಂದ ಅಲ್ಲಿನ ನಿವಾಸಿಗಳಿಗೆ ವಾಯುಮಾಲಿನ್ಯ, ಶಬ್ಧಮಾಲಿನ್ಯ ಹಾಗೂ ಅಪಘಾತಗಳಾಗುವ ಸಂಭವವಿರುವುದರಿಂದ ಭಾರೀ ವಾಹನಗಳ ಚಾಲಕರು ತಮ್ಮ ವಾಹನಗಳನ್ನು ಈ ಮಾರ್ಗದ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿನೋಬನಗರದ ಮೊದಲನೇ ಹಂತದ 6ನೇ ತಿರುವಿನಲ್ಲಿ ಸಂಚರಿಸುವ ಭಾರೀ ವಾಹನಗಳು ಈ ಮಾರ್ಗದ ಬದಲಾಗಿ ಕೆ.ಇ.ಬಿ. ಸಮೀಪವಿರುವ 60ಅಡಿ ರಸ್ತೆಯ ಮುಖಾಂತರ ಹಾಗೂ ಲಕ್ಷ್ಮೀ ಚಿತ್ರಮಂದಿರದ ಸಮೀಪದಲ್ಲಿ ಇರುವ ತುಂಗಾ ಚಾನಲ್ ಹಿಂಭಾಗದ ರಸ್ತೆಯ ಮುಖಾಂತರ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153