ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ  ಅವರ ಜನ್ಮದಿನವಾದ ಇಂದು (ಸೆ.17 ಅನ್ನು) ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಆಚರಿಸಲಾಗುತ್ತಿದೆ.
ನರೇಂದ್ರಮೋದಿಯವರು ೨೦೧೪ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ ಮೂಲಕ ಯುವ ಜನತೆಯ ಸ್ವಾಭಿಮಾನ ಕೆಣಕಿದ್ದರು.
ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಮುಚ್ಚುತ್ತಾ ಉದ್ಯೋಗಿಗಳನ್ನೂ ನಿರುದ್ಯೋಗಿಗಳನ್ನಾಗಿ ಮಾಡಲಾಗುತ್ತಿದೆ. ಕೋಟ್ಯಂತರ ಪದವೀಧರರು, ಸ್ನಾತಕೋತ್ತರ ಪದವೀಧರರು, ತಾಂತ್ರಿಕ ಪದವಿ ಪಡೆದವರು ಉದ್ಯೋಗವಿಲ್ಲದೇ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಯುವ ಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಇಂದು ‘ಮೋದಿ ಹಠಾವೋ ಉದ್ಯೋಗ್ ಬಚಾವೋ’ ಎಂಬ ಘೋಷಣೆಯೊಂದಿಗೆ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಆಚರಣೆ ಮಾಡುತ್ತಿದ್ದೇವೆ.
ಕೂಡಲೇ ಕೇಂದ್ರ ಸರ್ಕಾರ ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರಕಿಸಬೇಕು. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು ಪುನಶ್ಚೇತನಗೊಳಿಸಬೇಕು. ಮೇಕ್ ಇನ್ ಇಂಡಿಯಾ ಎನ್ನುವುದನ್ನು ಕೇವಲ ಘೋಷಣೆಗೆ ಸೀಮಿತಗೊಳಿಸದೆ, ಕಾರ್ಯರೂಪಕ್ಕೆ ತರಬೇಕು. ಎಲ್ಲ ವಲಯದಲ್ಲೂ ವಿಫುಲ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ.ಈ ಸಂದರ್ಭದಲ್ಲಿ ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ ,ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ್ರು,ಅಲ್ಪಸಂಖ್ಯಾತ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್ ನಿಯಾಲ್ ,ಮುಜೀಬ್ ,ಫೈರೋಜ್ ,ಅಕ್ಬರ್ ಕಾಂಗ್ರೆಸ್ ಪಕ್ಷದ ಮುಖಂಡರಾದ ಚಿರಂಜೀವಿ ಬಾಬು, ಶಿವಾನಂದ್,ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷರಾದ ಗಿರೀಶ್ ,ಯುವ ಕಾಂಗ್ರೆಸ್ ನ ಮುಖಂಡರಾದ ಮಧುಸೂದನ್ ,ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ವಿನಯ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಗಿರೀಶ್ , ಸುರೇಶ್,ಪುರಲೆ ಮಂಜು ಹಾಗೂ ಬಾಲಾಜಿ ,ರವಿ, ವಿಜಯ್, ಚಂದ್ರೋಜಿ ರಾವ್, ಅರ್ಜುನ್ , ಮಂಜು, ಭರತ,ಆಕಾಶ ,ಆಲ್ವಿನ್, ಸಂಜು ,ಕಿರಣ ,ಚೆಂಡು ಮತ್ತು ನೂರಾರು ನಿರುದ್ಯೋಗಿ ಯುವಕರು ಪಾಲ್ಗೊಂಡು ಯಶಸ್ವಿಗೊಳಿಸಿದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153