ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ .ಎಸ್ ಸುಂದರೇಶ್ ಅವರ ಜನ್ಮದಿನದ ಅಂಗವಾಗಿ ಇಂದು ಬೆಳಿಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು ಕೇಕ್ ನೀಡಿ ಶುಭ ಹಾರೈಸಿದರು. ಗೋಪಾಳದ ದ್ರೌಪದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ವೃದ್ಧಾಶ್ರಮ ಮತ್ತು ಅಂಧರ ಆಶ್ರಮದಲ್ಲಿ ಹಣ್ಣು ಹಂಪಲು ವಿತರಣೆ ಅನ್ನಸಂತರ್ಪಣೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ರಾಮೇಗೌಡ ,ವಿಜಯಲಕ್ಷ್ಮೀ ಪಾಟೀಲ್ ,ದೇವಿಕುಮಾರ್, ವಿಜಯಕುಮಾರ್ ,ರಾಜು, ಸೌಗಂಧಿಕಾ ,ಚಂದ್ರಭೂಪಾಲ್, ಸೇರಿದಂತೆ ಕಾಂಗ್ರೆಸ್ ನ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು ಶಾಲು ಹೊದಿಸಿ ಪೇಟ ತೊಡಿಸಿ ಶುಭ ಹಾರೈಸಿದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ