ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯ ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಿಯಾಯಿತಿ ಬಡ್ಡಿದರದಲ್ಲಿ ನಾಲ್ಕು ಮತ್ತು ದ್ವಿಚಕ್ರ ವಾಹನ ಖರೀದಿ ಸಾಲ ಆಕರ್ಷಕ ಯೋಜನೆಯನ್ನು ದಿನಾಂಕ 24-09-2021 ರಿಂದ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯು ದಿನಾಂಕ 30-11-2021 ರವರೆಗೆ ಮಾತ್ರ ಸೀಮಿತವಾಗಿರುತ್ತದೆ.  ಜಿಲ್ಲೆಯ ರೈತ ಬಾಂಧವರು ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳುವಂತೆ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಬಿ. ಚನ್ನವೀರಪ್ಪನವರು ಕೋರಿರುತ್ತಾರೆ.  ಕಳೆದ ವರ್ಷವೂ ಇಂತಹ ಯೋಜನೆಯನ್ನು ಜಾರಿಗೆ ತಂದಿದ್ದು, ಹಲವಾರು ರೈತರು ಈ ಪ್ರಯೋಜನವನ್ನು ಪಡೆದಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇವೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ