ಆಗುಂಬೆ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ರಾತ್ರಿ ವೇಳೆ ಗಸ್ತಿನಲ್ಲಿದ್ದ ಎಸ್ ಐ ಶಿವಕುಮಾರ್ ಅವರ ತಂಡ ತಪಾಸಣೆ ವೇಳೆ ಹನ್ನೊಂದು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿ 1ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು ಧಾರವಾಡ ಮಂಗಳೂರು ಮಂಡ್ಯ ಈ ಜಿಲ್ಲೆಗಳಲ್ಲಿ ಒಟ್ಟು ಹನ್ನೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ . ಕಾರ್ಯಾಚರಣೆಯಲ್ಲಿ ಆಗುಂಬೆಯ ಪಿ ಎಸ್ ಐ ಶಿವಕುಮಾರ್ , ಸಿಬ್ಬಂದಿಗಳಾದ ದೇವದಾಸ್ ನಾಯಕ್ ವೀರೇಂದ್ರ ರಾಘವೇಂದ್ರ ಉಲ್ಲಾಸ್ ನವೀನ್ ಮಂಜುನಾಥ್ ಜ್ಞಾನೇಂದ್ರ ಭಾಗಿಯಾಗಿದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ