ವಿಶ್ವನಾಯಕ, ಭಾರತದ ಜನಪ್ರಿಯ ಪ್ರಧಾನಿ ಶ್ರೀ ನರೇಂದ್ರಮೋದಿ ರವರ 71ನೇ ಹುಟ್ಟುಹಬ್ಬದ ಅಂಗವಾಗಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಮಂಡಲ ಹಾಗೂ ವೈದ್ಯಕೀಯ ಪ್ರಕೋಷ್ಟ, ಒಬಿಸಿಮೋರ್ಚಾ ಮತ್ತು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲ್ಲೂಕಿನ ಪಿಳ್ಳ0ಗೆರೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಕೆ ಬಿ ಅಶೋಕ್ ನಾಯ್ಕ್, ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಎ. ಎನ್.ನಟರಾಜ್, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರತ್ನಾಕರ ಶೆಣೈ, ಜಿಲ್ಲಾ ಒಬಿಸಿಮೋರ್ಚಾ ಅಧ್ಯಕ್ಷರಾದ ಶ್ರೀ ಮಾಲತೇಶ್, ಆರೋಗ್ಯ ಕಾರ್ಯದ ಸಂಚಾಲಕರಾದ ಶ್ರೀ ವಿರೂಪಾಕ್ಷಪ್ಪ, ವೈದ್ಯಕೀಯ ಪ್ರಕೋಷ್ಟದ ಸಂಚಾಲಕರಾದ ಡಾ. ಶ್ರೀನಿವಾಸ ರೆಡ್ಡಿ, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಗೋಪಾಲ್, ಉಪಾಧ್ಯಕ್ಷ ರಾದ ಶ್ರೀ ಎಚ್. ಪಿ. ಪ್ರಕಾಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಅರುಣ್, ಪಿಳ್ಳ0ಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ *ಶ್ರೀ ಗಣೇಶ *ಹಾಗೂ ಸರ್ಜಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ, ಪ್ಯಾರಮೆಡಿಕಲ್ ನ ತಂಡದವರು ಭಾಗಿಯಾಗಿದ್ದರು.

ಈ ಸಂಧರ್ಭದಲ್ಲಿ ಸರ್ಜಿ ಆಸ್ಪತ್ರೆಯ ಡಾ. ಧನಂಜಯ್ ಸರ್ಜಿ ರವರನ್ನೊಳಗೊಂಡ ತಂಡದ ಸದಸ್ಯರಿಗೆ ಶಿವಮೊಗ್ಗ ಗ್ರಾಮಾಂತರ ಬಿಜೆಪಿಯ ಆರೋಗ್ಯ ಕಾರ್ಯದ ತಂಡದಿಂದ ಸನ್ಮಾನಿಸಲಾಯಿತು.

ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಈ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಪಡೆದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ