ಹೊಸಪೇಟೆಯಲ್ಲಿ ಮೂರು ದಿನಗಳ ಕಾಲ ನಡೆದ ಯುವ ಕ್ರಾಂತಿ ಬುನಾದಿ ನಾಯಕತ್ವ ಕಾರ್ಯಗಾರದಲ್ಲಿ ಎಐಸಿಸಿ ಜಂಟಿ ಕಾರ್ಯದರ್ಶಿ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಉಸ್ತುವಾರಿ ಕೃಷ್ಣ ಅಲ್ವಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಸಮಿತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಗಳಲ್ಲಿ ಮೊದಲನೆ ಜಿಲ್ಲೆಯಾಗಿ ಶಿವಮೊಗ್ಗ ಜಿಲ್ಲೆಯನ್ನು ಆಯ್ಕೆಮಾಡಿ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸೀತಾರಾಂ ಲಂಬ, ಕರ್ನಾಟಕ ಉಸ್ತುವಾರಿಗಳು ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಯಾದವ್ ರಾಷ್ಟ್ರೀಯ ಕಾರ್ಯದರ್ಶಿ ಸುರಭಿ ದಿವೇದಿ , ವಿದ್ಯಾ ಬಾಲಕೃಷ್ಣನ್ ಹಾಗೂ ರಾಜ್ಯಾಧ್ಯಕ್ಷರಾದ ರಕ್ಷ ರಾಮಯ್ಯನವರು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಎಚ್.ಪಿ. ಗಿರೀಶ್ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್ ಸಿರಿಗೆರೆ ರವರಿಗೆ ಅಭಿನಂದನಾ ಪತ್ರ ನೀಡಿ ಅಭಿನಂದಿಸಿದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ