30/9/21 ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯ ಕಾನ್ವೆಂಟ್ ವೃತ್ತ, ಸೇಕ್ರೆಡ್ ಹಾರ್ಟ್ ಚರ್ಚ್, ಸರ್ಕಾರಿ ಪ್ರೌಢಶಾಲೆಯ ಮುಂಭಾಗ, ಬಾಪೂಜಿ ನಗರದ ರಸ್ತೆ, ಇನ್ನೂ ಹಲವು ಕಡೆ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರ ಆದೇಶದಂತೆ ಶಿವಮೊಗ್ಗ ಜಿಲ್ಲಾದ್ಯಂತ 5ನೇ ದಿನದ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ರಮ ನಡೆಯುತ್ತಿದ್ದು ಇಂದು ಶಿವಮೊಗ್ಗ ನಗರದ ಎಲ್ಲಾ ಕಡೆ ಬೀದಿ ಬದಿ ವ್ಯಾಪಾರಿಗಳು ಸ್ವಚ್ಛತಾ ಕಾರ್ಯದಲ್ಲಿ ತೋಡಗಿಸಿ ಕೊಂಡಿರುವರ ದೃಶ್ಯ ಸಾಮಾನ್ಯವಾಗಿತ್ತು.

ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಶ್ರೀ ಶರತ್ ಸಿಂಗ್, ಬೂತ್ ಅಧ್ಯಕ್ಷರಾದ ನಾಗರಾಜ್, ಶ್ರೀಧರ್, ನೂರುಲ್ಲಾ ಖಾನ್, ಬೀದಿ ಬದಿ ವ್ಯಾಪಾರಸ್ಥರು ಹಾಗೂ ಇತರರೂ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ