ದಿನಾಂಕಃ-11-09-2021 ರಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೆಣಸಿನಕುಣಿ ಗ್ರಾಮದ ವಾಸದ ಮನೆಯೊಂದರಲ್ಲಿನ ಗಾಡ್ರೇಜ್ ಬೀರುವಿನಲ್ಲಿದ್ದ ಬೆಳ್ಳಿ, ಬಂಗಾರದ ಆಭರಣ ಮತ್ತು ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 242/2021 ಕಲಂ 380 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ. ಸದರಿ ಪ್ರಕರಣದ ತನಿಖೆಯನ್ನು ಕೈ ಗೊಂಡು ಪಿಐ, ಸಾಗರ ಗ್ರಾಮಾಂತರ ಠಾಣೆ, ಪಿಎಸ್ಐ ಮತ್ತು ಸಿಬ್ಬಂಧಿಗಳ ತಂಡವು ದಿನಾಂಕಃ- 26-09-2021 ರಂದು ಆರೋಪಿತನನ್ನು ದಸ್ತಗಿರಿ ಮಾಡಿ, ಆತನಿಂದ ಸಾಗರ ಗ್ರಾಮಾಂತರ ಠಾಣೆಯ ಒಟ್ಟು 04 ಪ್ರಕರಣಗಳಿಗೆ ಸಂಬಂಧಿಸಿದ 87 ಗ್ರಾಂ 500 ಮಿಲಿ ತೂಕದ ಬಂಗಾರದ ಆಭರಣ, 190 ಗ್ರಾಂ ತೂಕದ ಬೆಳ್ಳಿಯ ಆಭರಣ, ರೂ 41,680/- ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ