ಒಂದು ಕಾಲದಲ್ಲಿ ಏನು ಇಲ್ಲದ ಸಮಯದಲ್ಲಿ ಪಕ್ಷ ಕಟ್ಟಲು ಸಹಾಯ ಮಾಡಿದ ಸಮಾಜ ಎಂದರೆ ಗೌಡ ಸರಸ್ವತ ಸಮಾಜ
. ಬಿ. ಎಸ್ ಯಡಿಯೂರಪ್ಪ ನವರು ಕೊನೆಯ ಕ್ಯಾಬಿನೆಟ್ ನಲ್ಲಿ ಆರ್ಥಿಕವಾಗಿ ಹಿಂದುಳಿದ ವಿವಿಧ ಸಮಾಜದ ಬಂದುಗಳಿಗೆ 10% ಮೀಸಲಾತಿಯನ್ನು ಜಾರಿಗೆ ತಂದಿದ್ದಾರೆ.
ನಮ್ಮ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇವೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಕೂಡ ನಮ್ಮ ಶಿವಮೊಗ್ಗಕ್ಕೆ ಯಾವದೇ ಹಣಕಾಸಿನ ಸಮಸ್ಯೆಯಾಗಿಲ್ಲ. ಮುಂದಿನ ದಿನದಲ್ಲಿ ವಿವಿಧ ಕಾಮಗಾರಿಗಳು ಪೂರ್ಣಗೊಳ್ಳುವ ಸಮಯ ಹತ್ತಿರ ಬಂದಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು

ಶಿವಮೊಗ್ಗ ಜಿಲ್ಲಾ ಗೌಡ ಸಾರಸ್ವತ ಸಮಾಜ ಒಕ್ಕೂಟ ಶಿವಮೊಗ್ಗ ವತಿಯಿಂದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಎಂ.ಏ.ಡಿ. ಬಿ ಅಧ್ಯಕ್ಷರಾದ ಗುರುಮೂರ್ತಿ, ಮಹಾಪೌರರಾದ ಸುನೀತಾ ಅಣ್ಣಪ್ಪ,
ಜಿಲ್ಲಾ ಗೌರವ ಅಧ್ಯಕ್ಷರಾದ ದೇವದಾಸ್ ನಾಯ್ಕ್, ಒಕ್ಕೂಟದ ಅಧ್ಯಕ್ಷರಾದ ಶ್ರೀನಿವಾಸ್ ಕಾಮತ್. ರಾಜೇಂದ್ರ ಪೈ, ಮನೋಹರ್ ಕಾಮತ್, ರಾಜೇಶ್ ಕಾಮತ್, ಹೃಶಿಕೇಶ್ ಪೈ. ಸಂದೇಶ್ ಜವಳಿ ರಾಜೇಂದ್ರ ನಾಯ್ಕ್ ಮತ್ತಿತರು ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ